ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಸಚಿವೆ ಚೌಧುರಿ ವಿರುದ್ಧ ಎಫ್‌ಐಆರ್ ದಾಖಲಿಸಿ: ಕೋರ್ಟ್
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸಚಿವೆ ಚೌಧುರಿ ವಿರುದ್ಧ ಎಫ್‌ಐಆರ್ ದಾಖಲಿಸಿ: ಕೋರ್ಟ್
PTI
ಮಂಗಳೂರು ಪಬ್ ದಾಳಿ ಪ್ರಕರಣದ ಕುರಿತಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ರೇಣುಕಾ ಚೌಧುರಿ ವಿರುದ್ಧ ಕೂಡಲೇ ಎಫ್‌ಐಆರ್ ದಾಖಲಿಸುವಂತೆ ನಗರದ 3ನೇ ಜೆಎಂಎಫ್‌ಸಿ ನ್ಯಾಯಾಲಯ ಪೊಲೀಸರಿಗೆ ಸೂಚನೆ ನೀಡಿದೆ.

ನಗರದ ಎಮ್ನೇಶಿಯಾ ಪಬ್ ಮೇಲೆ ಶ್ರೀರಾಮಸೇನೆ ದಾಳಿ ನಡೆಸಿದ ವರದಿ ಮಾಧ್ಯಮಗಳಲ್ಲಿ ಬಿತ್ತರಗೊಂಡ ನಂತರ ಸಚಿವೆ ರೇಣುಕಾ ಚೌಧುರಿ ಅವರು, ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಮಂಗಳೂರು ತಾಲಿಬಾಲೀಕರಣಗೊಳ್ಳುತ್ತಿದೆ ಎಂದು ಹೇಳಿಕೆ ನೀಡಿದ್ದರು.

ಚೌಧುರಿ ಅವರು ನೀಡಿರುವ ಈ ಹೇಳಿಕೆ ವಿರುದ್ಧ ಮಂಗಳೂರಿನ ಮೇಯರ್ ಸೇರಿದಂತೆ ಹಲವರು ಕೋರ್ಟ್‌ನಲ್ಲಿ ಕ್ರಿಮಿನಲ್ ಮೊಕದ್ದಮೆ ಹೂಡಿದ್ದರು. ಇಂದು ವಿಚಾರಣೆ ನಡೆಸಿದ 3ನೇ ಜೆಎಂಎಫ್‌ಸಿ ನ್ಯಾಯಾಲಯ, ಸಚಿವೆ ವಿರುದ್ಧ ತಕ್ಷಣವೇ ಎಫ್‌ಐಆರ್ ದಾಖಲಿಸುವಂತೆ ಗ್ರಾಮಾಂತರ ಪೊಲೀಸರಿಗೆ ಆದೇಶ ನೀಡಿದ್ದು, ಮಾರ್ಚ್ 20ರೊಳಗೆ ವರದಿ ನೀಡುವಂತೆ ಸೂಚನೆ ನೀಡಿದೆ.


ಚೌಧುರಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಮಂಗಳೂರು ನ್ಯಾಯಾಲಯದಲ್ಲಿ ದಾಖಲಾಗಿದ್ದ ಕುರಿತು ಸುದ್ದಿಗಾರರು ಚೌಧುರಿ ಅವರನ್ನು ಮಂಗಳವಾರ ಪ್ರಶ್ನಿಸಿದ ಸಂದರ್ಭದಲ್ಲಿ, ಇದು ರಾಜಕೀಯ ಪ್ರೇರಿತ ಕ್ರಮವಾಗಿದ್ದು, ಈ ಬಗ್ಗೆ ಇದುವರೆಗೂ ತನಗೆ ಯಾವುದೇ ನೋಟಿಸ್ ತಲುಪಿಲ್ಲ ಎಂದು ತಿಳಿಸಿದ್ದರು.

ಅಲ್ಲದೇ ಮಂಗಳೂರಿನಲ್ಲಿ ಅಶಾಂತಿಯ ವಾತಾವರಣವಿದೆ ಎಂಬುದು ವಾಸ್ತವ. ಅಲ್ಲಿ ಶ್ರೀರಾಮ ಸೇನೆಯ ಪುಂಡಾಟಿಕೆಯೇ ನಡೆಯುತ್ತಿದೆ ಎಂಬುದು ಸ್ಪಷ್ಟ. ಹಾಗಿದ್ದ ಮೇಲೆ ನನಗೇಕೆ ಅವರು ನೋಟಿಸ್ ಕಳುಹಿಸಬೇಕು? ಈ ರೀತಿ ಮಾಡುವ ಬದಲಾಗಿ, ಗೂಂಡಾ ಶಕ್ತಿಗಳ ವಿರುದ್ಧ ಕರ್ನಾಟಕ ಸರಕಾರ ಕ್ರಮ ಕೈಗೊಳ್ಳುತ್ತಿಲ್ಲವೇಕೆ ಎಂದು ಅವರು ಪ್ರಶ್ನಿಸಿದ್ದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ವಿಕೃತಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ
ಮತಾಂತರ ನಿಷೇಧ ಕಾಯ್ದೆಯ ಅಗತ್ಯವಿದೆ: ಸುರೇಶ್ ಕುಮಾರ್
ರಾಜ್ಯ ಬಜೆಟ್‌‌ನಲ್ಲಿ ಅಭಿವೃದ್ದಿಗೆ ಆದ್ಯತೆ: ಸಿಎಂ
ಬೆಂಗಳೂರು: ಹಾಡಹಗಲೇ ಯುವಕನ ಕೊಲೆ
ಶೀಘ್ರದಲ್ಲೇ ನಿಲುವು ಪ್ರಕಟ: ಅಂಬರೀಷ್
ಅನಂತಮೂರ್ತಿ 'ಸಂಸ್ಕಾರ' ಕೃತಿಗೆ ಬಹುಮಾನ