ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಹೊಗೇನಕಲ್‌‌ಗೆ ಕೇಂದ್ರ ಗ್ರೀನ್ ಸಿಗ್ನಲ್: ಪ್ರತಿಭಟನೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಹೊಗೇನಕಲ್‌‌ಗೆ ಕೇಂದ್ರ ಗ್ರೀನ್ ಸಿಗ್ನಲ್: ಪ್ರತಿಭಟನೆ
NRB
ಕೇಂದ್ರ ಸರ್ಕಾರ ವಿವಾದಾತ್ಮಕ ಹೊಗೇನಕಲ್ ಯೋಜನೆ ಕಾಮಗಾರಿ ಕೈಗೊಳ್ಳಲು ತಮಿಳುನಾಡಿಗೆ ಗ್ರೀನ್ ಸಿಗ್ನಲ್ ತೋರಿಸಿರುವುದನ್ನು ಖಂಡಿಸಿ ಕನ್ನಡ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಯೋಜನೆ ಕೈಗೊಳ್ಳಬಾರದೆಂದು ರಾಜ್ಯ ಸರ್ಕಾರ ಹಾಗೂ ಕನ್ನಡಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದರೂ ಸಹ ಕೇಂದ್ರ ಕನ್ನಡಿಗರಿಗೆ ಕವಡೆ ಕಾಸಿನ ಮರ್ಯಾದೆ ನೀಡಿಲ್ಲ, ತನ್ನ ಮಧ್ಯಂತರ ಬಜೆಟ್‌ನಲ್ಲಿ ಹೊಗೇನಕಲ್ ಯೋಜನೆಗೆ ತಮಿಳುನಾಡು ಜಾಪನ್ ಸರ್ಕಾರದಿಂದ ಸಾಲ ಪಡೆಯಲು ಒಪ್ಪಿಗೆ ನೀಡಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಈ ಪ್ರದೇಶದಲ್ಲಿ ಜಂಟಿ ಸಮೀಕ್ಷೆ ನಡೆಸಿ ಎರಡೂ ರಾಜ್ಯಗಳಿಗೆ ನ್ಯಾಯ ದೊರಕಿಸಿಕೊಡಬೇಕಾದ ಕೇಂದ್ರ ಸರ್ಕಾರ ಒಂದು ಕಣ್ಣಿಗೆ ಬೆಣ್ಣೆ ಇನ್ನೊಂದು ಕಣ್ಣಿಗೆ ಸುಣ್ಣ ಎಂಬಂತೆ ರಾಜ್ಯಕ್ಕೆ ಅನ್ಯಾಯಗಳ ಸರಮಾಲೆ ಮುಂದುವರಿಸಿರುವುದನ್ನು ಕನ್ನಡ ಸೇನೆ ರಾಜ್ಯಾಧ್ಯಕ್ಷ ಕೆ.ಆರ್.ಕುಮಾರ್ ಖಂಡಿಸಿದ್ದಾರೆ.

ಕೂಡಲೇ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಯಾವುದೇ ಕಾರಣಕ್ಕೂ ಹೊಗೇನಕಲ್ ಯೋಜನೆ ಕೈಗೆತ್ತಿಕೊಳ್ಳಬಾರದೆಂದು ತಮಿಳುನಾಡು ಸರ್ಕಾರಕ್ಕೆ ತಾಕೀತು ಮಾಡಬೇಕು ಎಂದು ಕುಮಾರ್ ಆಗ್ರಹಿಸಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಕನ್ನಡ ಕಡೆಗಣನೆ: ಬಿಬಿಎಂಪಿ ವಿರುದ್ಧ ಚಂದ್ರು ಕಿಡಿ
ಸಚಿವೆ ಚೌಧುರಿ ವಿರುದ್ಧ ಎಫ್‌ಐಆರ್ ದಾಖಲಿಸಿ: ಕೋರ್ಟ್
ವಿಕೃತಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ
ಮತಾಂತರ ನಿಷೇಧ ಕಾಯ್ದೆಯ ಅಗತ್ಯವಿದೆ: ಸುರೇಶ್ ಕುಮಾರ್
ರಾಜ್ಯ ಬಜೆಟ್‌‌ನಲ್ಲಿ ಅಭಿವೃದ್ದಿಗೆ ಆದ್ಯತೆ: ಸಿಎಂ
ಬೆಂಗಳೂರು: ಹಾಡಹಗಲೇ ಯುವಕನ ಕೊಲೆ