ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಅಧಿವೇಶನ: ಸರ್ಕಾರದ ವಿರುದ್ಧ ವಿಪಕ್ಷಗಳ ವಾಗ್ದಾಳಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಅಧಿವೇಶನ: ಸರ್ಕಾರದ ವಿರುದ್ಧ ವಿಪಕ್ಷಗಳ ವಾಗ್ದಾಳಿ
ಗೃಹಸಚಿವ ವಿ.ಎಸ್.ಆಚಾರ್ಯ ರಾಜೀನಾಮೆಗೆ ಆಗ್ರಹ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಅದಕ್ಷ ಗೃಹಸಚಿವರಾಗಿರುವ ವಿ.ಎಸ್.ಆಚಾರ್ಯ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಗುರುವಾರ ಆರಂಭಗೊಂಡ ವಿಧಾಮಂಡಲದ ಅಧಿವೇಶನದಲ್ಲಿ ಪ್ರತಿಪಕ್ಷಗಳು ಆಗ್ರಹಿಸಿದವು.

ಎಲ್ಲೆಂದರಲ್ಲಿ ಕೊಲೆ ಪ್ರಕರಣ, ರೈತರ ಮೇಲೆ ದಬ್ಬಾಳಿಕೆ, ಪಬ್ ಮೇಲೆ ದಾಳಿ ಹೀಗೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯೇ ಹದಗೆಟ್ಟಿದೆ ಎಂದು ಆರೋಪಿಸಿದ ಪ್ರತಿಪಕ್ಷಗಳು, ಇದನ್ನು ಸಮರ್ಥವಾಗಿ ನಿಭಾಯಿಸಲು ಅಸಮರ್ಥರಾದ ಗೃಹಸಚಿವರು ರಾಜೀನಾಮೆ ನೀಡಬೇಕೆಂದು ಪಟ್ಟು ಹಿಡಿದವು.

ಏತನ್ಮಧ್ಯೆ ಪ್ರಥಮ ದಿನ ಅಧಿವೇಶನದಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಗೈರು ಹಾಜರಾಗಿದ್ದು ಕೂಡ ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗುವಂತಾಯಿತು. ಅಲ್ಲದೇ ಕಾನೂನು ಸುವ್ಯವಸ್ಥೆ ಕುರಿತು ಗಂಭೀರ ಚರ್ಚೆ ನಡೆಸಲು ಅವಕಾಶ ಮಾಡಿಕೊಡುವಂತೆ ಉಭಯ ಸದನಗಳಲ್ಲಿ ಪ್ರತಿಪಕ್ಷಗಳು ಬಿಗಿಪಟ್ಟು ಹಿಡಿದವು.

ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಮಧ್ನಾಹ್ನ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಿ 4ತಿಂಗಳ ಅವಧಿಗೆ ಲೇಕಾನುದಾನ ಕೇಳಲಿದ್ದಾರೆ.

ಗಡಿನಾಡು ಬೆಳಗಾವಿಯಲ್ಲಿ ಇತ್ತೀಚೆಗಷ್ಟೇ ಹತ್ತು ದಿನಗಳ ಕಾಲ ವಿಧಾನಮಂಡಲದ ಅಧಿವೇಶನ ಗಣಿಕಲಹದೊಂದಿಗೆ ಆರಂಭಗೊಂಡು, ಗಣಿ ಕಲಹದಲ್ಲೇ ಮುಕ್ತಾಯಗೊಂಡಿತ್ತು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಐಟಿ-ಬಿಟಿಗೆ ಹೆಚ್ಚಿನ ನೆರವು: ಯಡಿಯೂರಪ್ಪ
ಬಳ್ಳಾರಿ : ಭೀಕರ ಅಪಘಾತಕ್ಕೆ 15 ಬಲಿ
ಚುನಾವಣೆ: ರಣರಂಗವಾದ ಮೈಸೂರು ಪಾಲಿಕೆ
ಪಿಯು ವಿದ್ಯಾರ್ಥಿಗಳಿಗಾಗಿ ಸಹಾಯವಾಣಿ: ಕಾಗೇರಿ
ಪ್ರಾದೇಶಿಕ ಸಮಸ್ಯೆ ಜೆಡಿಎಸ್ ಚುನಾವಣಾ ಆಸ್ತ್ರ
'ಭಗೀರಥ'ನಾದ ಸಚಿವ: ಭಕ್ತರಿಗೆ ಗಂಗಾ ಜಲ!