ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಪಬ್ ದಾಳಿ: ನಿಮ್ಮನ್ನು ಯಾಕೆ ಗಡಿಪಾರು ಮಾಡಬಾರದು?
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಪಬ್ ದಾಳಿ: ನಿಮ್ಮನ್ನು ಯಾಕೆ ಗಡಿಪಾರು ಮಾಡಬಾರದು?
ನಗರದ ಎಮ್ನೇಶಿಯ ಪಬ್ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ 'ನಿಮ್ಮನ್ನು ಯಾಕೆ ಗಡಿಪಾರು ಮಾಡಬಾರದು' ಎಂದು ಕಾರಣ ಕೇಳಿ ಶ್ರೀರಾಮಸೇನೆಯ 12 ಕಾರ್ಯಕರ್ತರಿಗೆ ಶನಿವಾರ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಪಬ್ ದಾಳಿಯ ಬಳಿಕ ಮಂಗಳೂರು ತಾಲಿಬಾನೀಕರಣಗೊಳ್ಳುತ್ತಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ರೇಣುಕಾ ಚೌಧುರಿ ವಿರುದ್ಧ ಗ್ರಾಮಾಂತರ ಪೊಲೀಸರು ಎಫ್‌ಐಆರ್ ದಾಖಲಿಸಿ ಕೋರ್ಟ್‌ಗೆ ಸಲ್ಲಿಸಿದ ಬೆನ್ನಲ್ಲೇ, ಶ್ರೀರಾಮಸೇನೆಯ ಕಾರ್ಯಕರ್ತರಿಗೂ ನೋಟಿಸ್ ಜಾರಿ ಮಾಡುವ ಮೂಲಕ ಮತ್ತೊಂದು ಉರುಳಲ್ಲಿ ಸಿಲುಕಿಕೊಂಡಂತಾಗಿದೆ.

ಪಬ್ ಮೇಲೆ ಸ್ವಯಂಘೋಷಿತರಾಗಿ ದಾಳಿ ಮಾಡಿ, ಹಲ್ಲೆ ನಡೆಸಿದ ನಿಮ್ಮನ್ನು ಯಾಕೆ ಗಡಿಪಾರು ಮಾಡಬಾರದು ಎಂದು ಕಾರಣ ಕೇಳಿ ಶ್ರೀರಾಮಸೇನೆಯ ಪ್ರಸಾದ್ ಅತ್ತಾವರ ಸೇರಿದಂತೆ 12ಜನರಿಗೆ ನೋಟಿಸ್ ಜಾರಿ ಮಾಡಿದ್ದು, 30ದಿನದೊಳಗೆ ಉತ್ತರ ನೀಡುವಂತೆ ಸೂಚನೆ ನೀಡಿದ್ದಾರೆ.

ಪೊಲೀಸರು ನೀಡಿದ ನೋಟಿಸ್‌ಗೆ ಪ್ರತಿಕ್ರಿಯಿಸಿದ ಶ್ರೀರಾಮಸೇನೆಯ ಕಾರ್ಯಕರ್ತರು, ಪಬ್‌ನಲ್ಲಿ ನಡೆಯುತ್ತಿರುವ ಅಶ್ಲೀಲ ಕೃತ್ಯವನ್ನು ತಡೆಯಲು ನಾವು ಹೋಗಿದ್ದೇವೆ. ಆ ನಿಟ್ಟಿನಲ್ಲಿ ನಮ್ಮ ಮೇಲೆ ಗಡಿಪಾರಿನಂತಹ ಕ್ರಮಕೈಗೊಳ್ಳುವುದು ಸಮಂಜಸವಲ್ಲ ಎಂದು ತಿಳಿಸಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ರಾಮಚಂದ್ರೇಗೌಡ ವಿರುದ್ಧ ಮಾನನಷ್ಟ ಮೊಕದ್ದಮೆ
ಹೊಗೇನಕಲ್ ವಿವಾದ: ತ.ನಾಡು ವಿರುದ್ಧ ದೂರು
ಭ್ರಷ್ಟಾಚಾರಕ್ಕೆ ಸರಕಾರದ ಕುಮ್ಮುಕ್ಕು: ಹೆಗ್ಡೆ
ಬೆಂಗಳೂರು: 8ಕೋಟಿ ರೂ.ಹೆರಾಯಿನ್ ವಶ
ರಾಯಚೂರಿನಲ್ಲಿ ಉದ್ವಿಗ್ನ ಪರಿಸ್ಥಿತಿ - ನಿಷೇಧಾಜ್ಞೆ ಜಾರಿ
ಮೇಲಾಧಿಕಾರಿ ಕಿರುಕುಳ: ಪೇದೆ ಆತ್ಮಹತ್ಯೆ