ಗುಜರಾತ್ನಲ್ಲಿ ಯುವ ಕಾಂಗ್ರೆಸ್ನ ವಿವಿಧ ಸಮಿತಿಗಳ ಪದಾಧಿಕಾರಿಗಳ ಆಯ್ಕೆ ನಡೆಯುತ್ತಿರುವ ಚುನಾವಣಾ ಮಾದರಿಯಲ್ಲಿ ಕರ್ನಾಟಕ ಯುವ ಕಾಂಗ್ರೆಸ್ಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲು ನಿರ್ಧರಿಸಿರುವುದಾಗಿ ರಾಜ್ಯ ಯುವ ಕಾಂಗ್ರಸೆ ಅಧ್ಯಕ್ಷ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಯುವ ಕಾಂಗ್ರೆಸ್ ಬಲಗೊಳಿಸುವ ನಿಟ್ಟಿನಲ್ಲಿ ಮುಂಬರುವ ಲೋಕಸಭಾ ಚುನಾವಣೆಯೊಳಗೆ ಜಿಲ್ಲಾಮಟ್ಟದ ಸಮಾವೇಶ ನಡೆಸಲಾಗುವುದು. ಯುವ ಕಾಂಗ್ರೆಸ್ನ ತಳಮಟ್ಟದಿಂದ ಸಂಘಟಿಸಬೇಕಾಗಿದೆ. ಈ ನಿಟ್ಟಿನಲ್ಲಿ ಬ್ಲಾಕ್ ಮಟ್ಟದಿಂದ ಜಿಲ್ಲಾ ಮಟ್ಟದ ಸಮಿತಿಗಳನ್ನು ಪುನರ್ರಚಿಸಬೇಕಾಗಿದ್ದು, ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಸಭೆಗಳನ್ನು ನಡೆಸಲಾಗುತ್ತಿದೆ. ಇದೇ ಉದ್ದೇಶಕ್ಕಾಗಿ ಪ್ರವಾಸ ಕೈಗೊಂಡಿರುವುದಾಗಿ ಹೇಳಿದರು.
ರಾಹುಲ್ ಗಾಂಧಿ ಉಸ್ತುವಾರಿ ವಹಿಸಿಕೊಂಡ ನಂತರ ಯುವ ಕಾಂಗ್ರೆಸ್ಗೆ ಸಾಕಷ್ಟು ಬಲ ಬಂದಿದೆ. ರಾಜಕೀಯಕ್ಕೆ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಧುಮುಕಬೇಕು. ಹಾಗಾದಾಗ ಮಾತ್ರ ಬದಲಾವಣೆ ಸಾಧ್ಯ ಎಂಬುದು ರಾಹುಲ್ ಗಾಂಧಿ ಆಶಯ. ಈ ನಿಟ್ಟಿನಲ್ಲಿ ಗ್ರಾಮ ಮಟ್ಟದಿಂದ ಯುವಕರನ್ನು ಸಂಘಟಿಸುವ ಕಾರ್ಯವನ್ನು ಮಾಡುತ್ತಿದ್ದೇವೆ ಎಂದರು.
ಯುವ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳ ಸಭೆ ನಡೆಸುವ ಸಲುವಾಗಿ ನಗರಕ್ಕೆ ಆಗಮಿಸಿದ್ದ ಕೃಷ್ಣಬೈರೇಗೌಡ ಅವರನ್ನು ಪ್ರತಿ ಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಬೆಂಬಲಿಗರು ತರಾಟೆಗೆ ತೆಗೆದುಕೊಂಡರು. ಖರ್ಗೆ ಬದಲಾವಣೆ ಬಗ್ಗೆ ನಿಮ್ಮ ನಿಲುವೇನು ಎಂದು ಖರ್ಗೆ ಬೆಂಬಲಿಗರು ಕೃಷ್ಣೇಬೈರೇಗೌಡರನ್ನು ಪ್ರಶ್ನಿಸಿದಾಗ, ಇದು ಹೈಕಮಾಂಡ್ಗೆ ಬಿಟ್ಟ ವಿಷಯ. ಇದರಿಂದ ಕುಪಿತಗೊಂಡ ಬೆಂಬಲಿಗರು, ಹಿರಿಯ ನಾಯಕನಿಗೆ ಅನ್ಯಾಯವಾಗುತ್ತಿದ್ದರೆ ನೀವೆಲ್ಲ ಮೌನವಾಗಿದ್ದೀರಿ. ಇದು ಸರಿಯಲ್ಲ ಎಂದು ತರಾಟೆಗೆ ತೆಗೆದುಕೊಂಡರು. |