ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಇನ್ನೆರಡು ದಿನದಲ್ಲಿ ಜೆಡಿಎಸ್‌‌ಗೆ ಸಂಸದ ಶಿವಣ್ಣ ಗುಡ್ ಬೈ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಇನ್ನೆರಡು ದಿನದಲ್ಲಿ ಜೆಡಿಎಸ್‌‌ಗೆ ಸಂಸದ ಶಿವಣ್ಣ ಗುಡ್ ಬೈ
ಚಾಮರಾಜನಗರದ ಸಂಸದ ಜೆಡಿಎಸ್‌ನ ಶಿವಣ್ಣ ಅವರು ಇನ್ನೆರಡು ದಿನದಲ್ಲಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮಂಗಳವಾರ ತಿಳಿಸಿದ್ದಾರೆ.

ಮಂಗಳವಾರ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದ ಸ್ಥಾನಕ್ಕೂ ಹಾಗೂ ಜೆಡಿಎಸ್‌ಗೂ ರಾಜೀನಾಮೆ ನೀಡುವುದಾಗಿ ತಿಳಿಸಿದ ಅವರು, ಇನ್ನೆರಡು ದಿನದಲ್ಲಿ ತನ್ನ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದಾರೆ.

ಜೆಡಿಎಸ್‌ನಿಂದ ಸಂಸದನಾಗಿ ಆಯ್ಕೆಯಾಗಿದ್ದರೂ ಕೂಡ ಪಕ್ಷದ ವರಿಷ್ಠರಾದ ದೇವೇಗೌಡರಾಗಲಿ, ಕುಮಾರಸ್ವಾಮಿಯವರಾಗಲಿ ತನ್ನನ್ನು ಲೆಕ್ಕಕ್ಕೆ ತೆಗೆದುಕೊಳ್ಳದೆ ಕಡೆಗಣಿಸುತ್ತಿರುವುದರಿಂದ ಪಕ್ಷದಿಂದ ಹೊರಬರುತ್ತಿರುವುದಾಗಿ ಅವರು ಕಾರಣ ನೀಡಿದ್ದಾರೆ.

ಅಲ್ಲದೇ ಶೀಘ್ರವೇ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಳ್ಳುವುದಾಗಿ ಹೇಳಿದ ಶಿವಣ್ಣ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸುವುದಾಗಿ ತಿಳಿಸಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಅಧಿವೇಶನ: ಕಾಂಗ್ರೆಸ್ ಧರಣಿ-ಸಭಾತ್ಯಾಗ
ಲೋಕಸಭೆ-ಶೀಘ್ರವೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಬಳ್ಳಾರಿ ವಿಮಾನ ನಿಲ್ದಾಣ ಮಾಡಿಯೇ ಸಿದ್ಧ: ಸಿಎಂ
26, 27ರಂದು ಮದರಾಸಿನಲ್ಲಿ ಕನ್ನಡದ ಕಹಳೆ
'ಡಾಕ್ಟರ್' ಅಂತ ಕರೀಬೇಡಿ-ಯಡಿಯೂರಪ್ಪ ಆಜ್ಞೆ
ಕುರ್ಚಿ ಬಿಡಲು ಖರ್ಗೆ ನಕಾರ:ಇಕ್ಕಟ್ಟಿನಲ್ಲಿ ಕಾಂಗ್ರೆಸ್