ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಮರಾಠರಿಗೆ ಅನ್ಯಾಯವಾದರೆ ರಕ್ತ ಹರಿಸಲು ಸಿದ್ದ: ಛಗನ್
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಮರಾಠರಿಗೆ ಅನ್ಯಾಯವಾದರೆ ರಕ್ತ ಹರಿಸಲು ಸಿದ್ದ: ಛಗನ್
ಗಡಿಭಾಗದಲ್ಲಿ ಜನರಲ್ಲಿ ದ್ವೇಷ ಭಾವ ಮೂಡುವಲ್ಲಿ ಅವಿರತವಾಗಿ ಶ್ರಮಿಸುತ್ತಿರುವ ಮಹಾರಾಷ್ಟ್ರ ಉದ್ರೇಕಕಾರಿ ಹೇಳಿಕೆಗಳನ್ನು ನೀಡುವುದನ್ನು ಮತ್ತೆ ಮುಂದುವರಿಸಿದ್ದು, ಗಡಿಭಾಗದ ಮರಾಠಿಗರಿಗೆ ಅನ್ಯಾಯವಾದಲ್ಲಿ ರಕ್ತ ಹರಿಸಲು ಸಿದ್ದ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಛಗನ್ ಭುಜಬಲ್ ಕಿಡಿಕಾರಿದ್ದಾರೆ.

ಕೊಲ್ಲಾಪುರದಲ್ಲಿ ಮಂಗಳವಾರ ಎಂಇಎಸ್ ಆಶ್ರಯದ ಸಂಘಟನೆಗಳು ಏರ್ಪಡಿಸಿದ್ದ ಭವ್ಯ ಸೀಮಾ ಪರಿಷದ್‌‌ದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಬೆಳಗಾವಿ ಗಡಿವಾದ ಕುರಿತಂತೆ ಮಹಾಜನ್ ಆಯೋಗ ಮರಾಠಿಗರಿಗೆ ಅನ್ಯಾಯ ಮಾಡಿದೆ. ಗಡಿ ತಂಟೆಯ ಸಮಸ್ಯೆ ಬಿಡಿಸಲು ಚಳವಳಿ ಇನ್ನಷ್ಟು ತೀವ್ರಗೊಳಿಸಲಾಗುವುದು. 50 ವರ್ಷಗಳಿಂದ ಕರ್ನಾಟಕದಲ್ಲಿ ಮರಾಠಿಗಳ ಮೇಲೆ ದೌರ್ಜನ್ಯ ನಡೆಯುತ್ತಿದ್ದು, ಇನ್ನು ಮುಂದೆ ಅದನ್ನು ಸಹಿಸಲು ಸಾಧ್ಯವಿಲ್ಲ ಎಂದು ಗುಡುಗಿದರು.

ಗಡಿ ಸಮಸ್ಯೆ ಇತ್ಯರ್ಥವಾಗದೆ ನೆನೆಗುದಿಗೆ ಬಿದ್ದಿದೆ. ಈ ವಿಷಯದ ಬಗ್ಗೆ ಕೇಂದ್ರ ಸರ್ಕಾರ ಮರಾಠಿ ಭಾಷಿಕರ ಭಾವನೆಯನ್ನು ಅರ್ಥಮಾಡಿಕೊಳ್ಳಬೇಕು. ಮರಾಠಿಗರ ಹೋರಾಟ ನಿಲ್ಲದು ಎಂದಿಗೂ ನಿಲ್ಲುವುದಿಲ್ಲ ಎಂದು ಎಚ್ಚರಿಕೆಯನ್ನೂ ನೀಡಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಅರಣ್ಯ ಒತ್ತುವರಿ ಸಕ್ರಮ ಸಾಧ್ಯವಿಲ್ಲ: ಸಿಎಂ
ಮೈಷುಗರ್ ಪುನಶ್ಚೇತನಕ್ಕೆ ಆರ್ಥಿಕ ನೆರವು
ಬಿಜೆಪಿಗೆ 'ಏಡ್ಸ್' ಬಂದಿದೆ: ಮಲ್ಲಿಕಾರ್ಜುನ ಖರ್ಗೆ
ವಿಧಾನಸಭೆ: ವೈ.ಸಂಪಂಗಿ ಅಮಾನತಿಗೆ ಆಗ್ರಹ
ರಾಜ್ಯದಲ್ಲಿರುವುದು ಹಿಜಡಾ ಸರಕಾರ: ಖರ್ಗೆ
ಇನ್ನೆರಡು ದಿನದಲ್ಲಿ ಜೆಡಿಎಸ್‌‌ಗೆ ಸಂಸದ ಶಿವಣ್ಣ ಗುಡ್ ಬೈ