ರೇಸ್ ಕೋರ್ಸ್ ಆವರಣವನ್ನು ಪ್ರೇಕ್ಷಣೀಯ ಸ್ಥಳವನ್ನಾಗಿ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದು, ಅದನ್ನು ಶೀಘ್ರವೇ ಸ್ಥಳಾಂತರಿಸುವುದಾಗಿ ಹೇಳಿದ್ದಾರೆ.
ಹಳೆಯ ಸೆಂಟ್ರಲ್ ಜೈಲ್ ಆವರಣದಲ್ಲಿ ನಿರ್ಮಿಸಿರುವ ಸ್ವಾತಂತ್ರ್ಯ ಉದ್ಯಾನವನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇನ್ನೊಂದು ವರ್ಷದಲ್ಲಿ ರೇಸ್ ಕೋರ್ಸ್ ಬೇರೆಡೆಗೆ ಸ್ಥಳಾಂತರ ಮಾಡಿ ಆ ಪ್ರದೇಶವನ್ನು ಪ್ರಮುಖ ಆಕರ್ಷಣೆ ಕೇಂದ್ರವನ್ನಾಗಿ ಅಭಿವೃದ್ದಿ ಪಡಿಸಲಾಗುವುದು ಎಂದರು.
ಅಲ್ಲದೆ, ಉದ್ಯಾನವನಗಳಲ್ಲಿ ಮತ್ತಷ್ಟು ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಂಡು ನಗರದ ಪ್ರೇಕ್ಷಣೀಯ ಸ್ಥಳವನ್ನಾಗಿ ಮಾಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ಜನತೆ ಮೆಚ್ಚುವಂತಹ ಅಭಿವೃದ್ದಿ ಕೆಲಸಗಳನ್ನು ತಮ್ಮ ಅಧಿಕಾರದ ಅವಧಿಯಲ್ಲಿ ಕೈಗೊಳ್ಳಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ. |