ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಮಾ.12ಕ್ಕೆ ತೃತೀಯ ರಂಗಕ್ಕೆ ಚಾಲನೆ: ದೇವೇಗೌಡ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಮಾ.12ಕ್ಕೆ ತೃತೀಯ ರಂಗಕ್ಕೆ ಚಾಲನೆ: ದೇವೇಗೌಡ
ಲೋಕಸಭಾ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗ ಘೋಷಿಸಿದ ಬೆನ್ನಲ್ಲೇ, ಕಾಂಗ್ರೆಸ್ ಹಾಗೂ ಬಿಜೆಪಿಗೆ ಪರ್ಯಾಯವಾಗಿ ಮಾರ್ಚ್ 12ರಂದು ಎಡಪಕ್ಷ ಸೇರಿದಂತೆ ಎಂಟು ಪಕ್ಷಗಳ ಮೈತ್ರಿಯೊಂದಿಗೆ ತೃತೀಯ ರಂಗಕ್ಕೆ ಚಾಲನೆ ನೀಡಲಾಗುವುದು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸೋಮವಾರ ಘೋಷಿಸಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ 12ರಂದು ತುಮಕೂರಿನಲ್ಲಿ ನಡೆಯಲಿರುವ ಬೃಹತ್ ರಾಲಿಯಲ್ಲಿ ತೃತೀಯ ರಂಗಕ್ಕೆ ಚಾಲನೆ ನೀಡಲಾಗುವುದು ಎಂದರು.

ಸಿಪಿಎಂ, ಸಿಪಿಐ, ಫಾರ್ವರ್ಡ್ ಬ್ಲಾಕ್, ಆರ್‌ಪಿಐ, ಟಿಡಿಪಿ, ಟಿಆರ್‌ಎಸ್, ಎಐಎಡಿಎಂಕೆ ಮತ್ತು ಜೆಡಿಎಸ್ ಸೇರಿದಂತೆ ಎಂಟು ಪಕ್ಷಗಳು ತೃತೀಯ ರಂಗ ರಚನೆಗೆ ಒಪ್ಪಿಗೆ ಸೂಚಿಸಿದ್ದು, ತುಮಕೂರಿನಲ್ಲಿ ನಡೆಯಲಿರುವ ರಾಲಿಯಲ್ಲಿ ಅವು ಭಾಗವಹಿಸಲಿವೆ ಎಂದು ಗೌಡರು ಹೇಳಿದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗೆ ಸಡ್ಡು ಹೊಡೆಯುವ ನೆಲೆಯಲ್ಲಿ ತೃತೀಯ ರಂಗದ ರಚನೆಯನ್ನು ಮುನ್ನೆಡೆಸುವ ಹೊಣೆ ಗೌಡರ ಹೆಗಲೇರಿದೆ.

ಆದರೆ ತೃತೀಯ ರಂಗದದಿಂದ ಪ್ರಧಾನ ಮಂತ್ರಿ ಅಭ್ಯರ್ಥಿ ಯಾರೆಂಬ ಬಗ್ಗೆ ಚರ್ಚೆಯಾಗಿಲ್ಲ, ಅಥವಾ ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಅವರನ್ನೇ ಪ್ರಧಾನಮಂತ್ರಿ ಹುದ್ದೆಗಾದಿಗೆ ಬೆಂಬಲ ನೀಡಬೇಕೆಂಬ ಬಗ್ಗೆ ಇನ್ನಷ್ಟೇ ಮಾತುಕತೆ ನಡೆಯಬೇಕು ಎಂದು ದೇವೇಗೌಡರು ಹೇಳಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಯಲಹಂಕ ರಸ್ತೆಗೆ ಮೇ.ಸಂದೀಪ್ ಹೆಸರು: ಸಿಎಂ
ಸರಕಾರಕ್ಕೆ ಯಾರ ಸರ್ಟಿಫಿಕೇಟ್ ಬೇಡ: ಯಡಿಯೂರಪ್ಪ
ಅಭಿವೃದ್ದಿ ಕುಂಠಿತಕ್ಕೆ ಹಿಂದಿನ ಸರಕಾರಗಳ ನಿರ್ಲಕ್ಷ್ಯ ಕಾರಣ: ಸಿಎಂ
ಕಾಂಗ್ರೆಸ್ ಅವನತಿಗೆ ಡಿಕೆಶಿ ಕಾರಣ: ಯೋಗೇಶ್ವರ್
ವಜಾದ ಹಿಂದೆ ರಾಜಕೀಯ ಪಿತೂರಿ ಇದೆ: ನಿರ್ಮಲಾ
ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಹೈಕಮಾಂಡ್‌ಗೆ