ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ರಾಜ್ಯದಲ್ಲಿ ಅನಿಯಮಿತ ಲೋಡ್‌‌ಶೆಡ್ಡಿಂಗ್ ಜಾರಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ರಾಜ್ಯದಲ್ಲಿ ಅನಿಯಮಿತ ಲೋಡ್‌‌ಶೆಡ್ಡಿಂಗ್ ಜಾರಿ
ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದ ಎರಡು ಘಟಕಗಳು ಕೈಕೊಟ್ಟಿರುವ ಕಾರಣ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಮತ್ತಷ್ಟು ಬಿಗಡಾಯಿಸಿದ್ದು, ಭಾನುವಾರದಿಂದಲೇ ಎಲ್ಲೆಡೆ ಅನಿಯಮಿತ ಲೋಡ್ ಶೆಡ್ಡಿಂಗ್ ಪ್ರಮಾಣ ಹೆಚ್ಚಾಗಿದೆ.

ತಾಂತ್ರಿಕ ತೊಂದರೆಗಳಿಂದಾಗಿ ಆರ್‌ಟಿಪಿಎಸ್‌ನ ಒಂದು ಮತ್ತು ಮೂರನೇ ಘಟಕಗಳು ಶನಿವಾರ ರಾತ್ರಿಯಿಂದಲೇ ಸ್ಥಗಿತಗೊಂಡಿದೆ. ಹೀಗಾಗಿ ಸುಮಾರು 300 ಮೆಗಾವಾಟ್‌ನಷ್ಟು ವಿದ್ಯುತ್ ಖೋತಾ ಆಗಿದೆ. ಕೊರತೆ ಪ್ರಮಾಣ ಹೆಚ್ಚಾಗಿರುವ ಕಾರಣ ಅನಿಯಮಿತ ಲೋಡ್ ಶೆಡ್ಡಿಂಗ್ ಮಾಡುವುದು ಅನಿವಾರ್ಯ ಎಂದು ಉನ್ನತ ಮೂಲಗಳು ದೈನಿಕವೊಂದಕ್ಕೆ ತಿಳಿಸಿವೆ.

ಭಾನುವಾರ ಮತ್ತು ಸೋಮವಾರ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಎಲ್ಲೆಡೆ ಆಗಿಂದಾಗ್ಗೆ ವಿದ್ಯುತ್ ವ್ಯತ್ಯಯ ಮಾಮೂಲಿಯಾಗಿದೆ. ಬೇಸಿಗೆಯ ಕಾವು ಹೆಚ್ಚಾಗುತ್ತಿದ್ದಂತೆಯೇ ವಿದ್ಯುತ್ ಅಭಾವವೂ ಹೆಚ್ಚಾಗುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆ ಉಂಟಾಗಿದೆ.

ಆದರೆ ಈಶ್ವರಪ್ಪ ಮಾತ್ರ ಛತ್ತೀಸ್‌ಗಢದಿಂದ ಪೂರೈಕೆಯಾಗುತ್ತಿರುವ ವಿದ್ಯುತ್ ಶೀಘ್ರದಲ್ಲಿಯೇ ಸ್ಥಗಿತಗೊಳ್ಳುವ ಸಂಭವವಿದೆ ಎಂದು ಶನಿವಾರವಷ್ಟೇ ತಿಳಿಸಿದ್ದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ತೇಜಸ್ವಿನಿ ಟಿಕೆಟ್ ತಪ್ಪಿಸಲು ಪ್ರಯತ್ನಿಸಿಲ್ಲ: ಡಿಕೆಶಿ
ಅಮೃತ ಮಹೋತ್ಸವದಲ್ಲಿ ರಜನಿಕಾಂತ್ ಮೋಡಿ
ಶೋಷಿತರ ಪರ ಧ್ವನಿ ಎತ್ತಿದ್ದು ವಚನ ಸಾಹಿತ್ಯ: ಸಬೀಹ
ಮಾ.12ಕ್ಕೆ ತೃತೀಯ ರಂಗಕ್ಕೆ ಚಾಲನೆ: ದೇವೇಗೌಡ
ಯಲಹಂಕ ರಸ್ತೆಗೆ ಮೇ.ಸಂದೀಪ್ ಹೆಸರು: ಸಿಎಂ
ಸರಕಾರಕ್ಕೆ ಯಾರ ಸರ್ಟಿಫಿಕೇಟ್ ಬೇಡ: ಯಡಿಯೂರಪ್ಪ