ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್: ಅಶೋಕ್
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್: ಅಶೋಕ್
ಮುಂದಿನ ಶೈಕ್ಷಣಿಕ ವರ್ಷದಿಂದ 7ನೇ ತರಗತಿಯವರೆಗಿನ ಎಲ್ಲ ಮಕ್ಕಳಿಗೂ ಉಚಿತ ಬಸ್ ಪಾಸ್ ನೀಡಲಾಗುವುದು ಎಂದು ಸಾರಿಗೆ ಸಚಿವ ಆರ್.ಅಶೋಕ್ ಘೋಷಿಸಿದ್ದಾರೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ದೊಮ್ಮಲೂರಿನಲ್ಲಿ ಏರ್ಪಡಿಸಿದ್ದ ಸಂಚಾರ ಮತ್ತು ಸಾಗಣೆ ನಿರ್ಮಾಣ ಕೇಂದ್ರದ ಶಂಕುಸ್ಥಾಪನೆ ಸಮಾಂಭದಲ್ಲಿ ಈ ವಿಷಯ ತಿಳಿಸಿದ ಅವರು, 10ನೇ ತರಗತಿವರೆಗಿನ ಹೆಣ್ಣು ಮಕ್ಕಳಿಗೆ ಬಸ್ ಪಾಸ್ ದರದಲ್ಲಿ ಶೇ.25ರಷ್ಟು ರಿಯಾಯಿತಿ ನೀಡಲಾಗುವುದು ಎಂದರು.

ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿಗೆ ಕ್ರಮಕೈಗೊಳ್ಳಲಾಗುವುದು. ಈಗಾಗಲೇ 4ಸಾವಿರ ಸಿಬ್ಬಂದಿ ನೇಮಕವಾಗಿದ್ದು, ಇನ್ನೂ 3ಸಾವಿರ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಹೇಳಿದರು.

ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹೈಟೆಕ್ ಬಸ್ ನಿಲ್ದಾಣಗಳನ್ನು ನಿರ್ಮಿಸಲಾಗುವುದು. ಜನರಿಗೆ ಗುಣಮಟ್ಟದ ಸೇವೆ, ಸೌಲಭ್ಯಗಳನ್ನು ನೀಡಬೇಕು. ಸ್ವಚ್ಚತೆಯನ್ನು ಕಾಪಾಡಬೇಕು ಎಂಬುದು ನಮ್ಮ ಉದ್ದೇಶ. ನಾಗರಿಕ ಸ್ನೇಹಿಯಾದ ಬಸ್‌ಗಳ ವ್ಯವಸ್ಥೆಯನ್ನು ಸಹ ಮಾಡಲಿದ್ದೇವೆ ಎಂದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ರಾಜ್ಯದಲ್ಲಿ ಅನಿಯಮಿತ ಲೋಡ್‌‌ಶೆಡ್ಡಿಂಗ್ ಜಾರಿ
ತೇಜಸ್ವಿನಿ ಟಿಕೆಟ್ ತಪ್ಪಿಸಲು ಪ್ರಯತ್ನಿಸಿಲ್ಲ: ಡಿಕೆಶಿ
ಅಮೃತ ಮಹೋತ್ಸವದಲ್ಲಿ ರಜನಿಕಾಂತ್ ಮೋಡಿ
ಶೋಷಿತರ ಪರ ಧ್ವನಿ ಎತ್ತಿದ್ದು ವಚನ ಸಾಹಿತ್ಯ: ಸಬೀಹ
ಮಾ.12ಕ್ಕೆ ತೃತೀಯ ರಂಗಕ್ಕೆ ಚಾಲನೆ: ದೇವೇಗೌಡ
ಯಲಹಂಕ ರಸ್ತೆಗೆ ಮೇ.ಸಂದೀಪ್ ಹೆಸರು: ಸಿಎಂ