ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಹಿಂದು ವೋಟ್ ಬ್ಯಾಂಕ್ ಸೃಷ್ಟಿ ಅಗತ್ಯ: ಪೇಜಾವರ ಶ್ರೀ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಹಿಂದು ವೋಟ್ ಬ್ಯಾಂಕ್ ಸೃಷ್ಟಿ ಅಗತ್ಯ: ಪೇಜಾವರ ಶ್ರೀ
NRB
ಮುಂದಿನ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಹಿಂದು ವೋಟ್ ಬ್ಯಾಂಕ್ ಸೃಷ್ಟಿ ಮಾಡಲಾಗುವುದು ಎಂದು ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

ದೇಶ ಎದುರಿಸುತ್ತಿರುವ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಹಿಂದು ಸಮಾಜದವರನ್ನು ಎಚ್ಚರಿಸಲು, ಸಮಾಜವನ್ನು ಅಪಾಯದಿಂದ ಪಾರು ಮಾಡಲು ಧರ್ಮ ರಕ್ಷಾ ಮಂಚ್‌‌ ಸಂಘಟನೆ ಮೂಲಕ ದೇಶಾದ್ಯಂತ ಸಮಾಜೋತ್ಸವ ಆಯೋಜಿಸಲು ನಿರ್ಧರಿಸಲಾಗಿದೆ. ಇದು ಪಕ್ಷಾತೀತವಾಗಿದ್ದು, ದೇಶದ ಎಲ್ಲ ಮಠಾಧೀಪತಿಗಳು ಇದರ ನೇತೃತ್ವ ವಹಿಸಲಿದ್ದಾರೆ ಎಂದು ಹೇಳಿದರು.

ಕೆಲವು ರಾಜಕೀಯ ಪಕ್ಷಗಳು ಬೇರೆ ಧರ್ಮವನ್ನು ತಮ್ಮ ವೋಟ್ ಬ್ಯಾಂಕ್ ಆಗಿ ಬಳಸಿಕೊಂಡು ಅವರನ್ನು ಹಿಂದು ಧರ್ಮದ ವಿರುದ್ಧ ಎತ್ತಿಕಟ್ಟುವ ಕೆಲಸ ಮಾಡುತ್ತಿವೆ. ಇದರ ವಿರುದ್ಧ ಹಿಂದುಗಳೆಲ್ಲ ಜಾಗೃತಗೊಂಡು ಹಿಂದು ವೋಟ್ ಬ್ಯಾಂಕ್ ಸೃಷ್ಟಿ ಮಾಡುವ ಕೆಲಸ ಆಗಬೇಕು ಎಂದು ಪೇಜಾವರ ಶ್ರೀ ಹೇಳಿದ್ದಾರೆ.

ವಿಶ್ವ ಹಿಂದು ಪರಿಷತ್, ಬಜರಂಗದಳ ಹಾಗೂ ಸಂಘ ಪರಿವಾರ ಒಂದಕದ್ಕೊಂದು ಸಂಬಂಧ ಹೊಂದಿದೆ. ಆದರೆ ಶ್ರೀ ರಾಮ ಸೇನೆಗೂ ಈ ಸಂಘಟನೆಗಳಿಗೂ ಸಂಬಂಧವಿಲ್ಲ ಎಂದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್: ಅಶೋಕ್
ರಾಜ್ಯದಲ್ಲಿ ಅನಿಯಮಿತ ಲೋಡ್‌‌ಶೆಡ್ಡಿಂಗ್ ಜಾರಿ
ತೇಜಸ್ವಿನಿ ಟಿಕೆಟ್ ತಪ್ಪಿಸಲು ಪ್ರಯತ್ನಿಸಿಲ್ಲ: ಡಿಕೆಶಿ
ಅಮೃತ ಮಹೋತ್ಸವದಲ್ಲಿ ರಜನಿಕಾಂತ್ ಮೋಡಿ
ಶೋಷಿತರ ಪರ ಧ್ವನಿ ಎತ್ತಿದ್ದು ವಚನ ಸಾಹಿತ್ಯ: ಸಬೀಹ
ಮಾ.12ಕ್ಕೆ ತೃತೀಯ ರಂಗಕ್ಕೆ ಚಾಲನೆ: ದೇವೇಗೌಡ