ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಅಪರಾಧಿಗಳ ಸ್ಪರ್ಧೆಗೆ ಅವಕಾಶವಿಲ್ಲ: ಚು. ಆಯೋಗ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಅಪರಾಧಿಗಳ ಸ್ಪರ್ಧೆಗೆ ಅವಕಾಶವಿಲ್ಲ: ಚು. ಆಯೋಗ
ಕಳೆದ ವಿಧಾನಸಭಾ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸಿ ಶಿಕ್ಷೆ ಅನುಭವಿಸಿದ ವ್ಯಕ್ತಿಗಳಿಗೆ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಇಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ರಾಜ್ಯ ಮುಖ್ಯ ಚುನಾವಣಾಧಿಕಾರಿ ಎಂ.ಎನ್.ವಿದ್ಯಾಶಂಕರ್ ಮತ್ತು ನಗರ ಪೊಲೀಸ್ ಆಯುಕ್ತ ಶಂಕರ ಬಿದರಿ ಈ ವಿಷಯ ತಿಳಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದವರ ವಿರುದ್ಧ ರಾಜ್ಯದ ನಾನಾ ಭಾಗಗಳಲ್ಲಿ ನಾಲ್ಕು ಸಾವಿರ ಕ್ರಿಮಿನಲ್ ಮೊಕದ್ದಮೆಗಳು ದಾಖಲಾಗಿವೆ. ಇವುಗಳಲ್ಲಿ ಕೆಲ ಪ್ರಕರಣ ರಾಜ್ಯದ ಕೆಲವು ಕೋರ್ಟ್‌‌ಗಳಲ್ಲಿ ವಿಚಾರಣೆ ಹಂತದಲ್ಲಿವೆ. ವಿವರ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು.

ನಗರದ ಸುತ್ತಮುತ್ತಲ ಐದು ಕ್ಷೇತ್ರಗಳೂ ಸೇರಿದಂತೆ ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ಮುಕ್ತ ಹಾಗೂ ಶಾಂತಿಯುತ ಮತದಾನಕ್ಕೆ ಆಯೋಗ ಹಾಗೂ ಪೊಲೀಸರು ಸಕಲ ಸಿದ್ಧತೆ ನಡೆಸಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರ ವ್ಯಾಪ್ತಿಗೆ ನಾಲ್ಕು ಕ್ಷೇತ್ರಗಳು ಒಳಪಟ್ಟಿರುತ್ತವೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಡಿವೈಎಸ್ಪಿ ಮಟ್ಟದ ಓರ್ವ ಪೊಲೀಸ್ ಅಧಿಕಾರಿ ಉಸ್ತುವಾರಿ ವಹಿಸುತ್ತಾರೆ.

ರಾಜಕಾರಣಿಗಳಾಗಲಿ, ಸಾರ್ವಜನಿಕರಾಗಲಿ ಚುನಾವಣಾ ನೀತಿ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ವಿದ್ಯಾಶಂಕರ್ ಸೂಚಿಸಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಅಮೃತಮಹೋತ್ಸವಕ್ಕೆ ಇಂದು ತೆರೆ
ಆಡ್ವಾಣಿಗೆ ಪ್ರಧಾನಿ ಯೋಗ್ಯತೆ ಇಲ್ಲ: ದೇಶಪಾಂಡೆ
ಯಡಿಯೂರಪ್ಪ ಸರ್ವಜ್ಞ: ದೇವೇಗೌಡ ಟೀಕೆ
ನಿರ್ಮಲಾ ವೆಂಕಟೇಶ್ ಬಿಜೆಪಿ ಪಾಳಯಕ್ಕೆ
ಬಿಜೆಪಿಗೂ ತಲೆ ನೋವಾದ ಕುಟುಂಬ ರಾಜಕಾರಣ!
ಹಿಂದು ವೋಟ್ ಬ್ಯಾಂಕ್ ಸೃಷ್ಟಿ ಅಗತ್ಯ: ಪೇಜಾವರ ಶ್ರೀ