ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಗಣಿ ವಿಚಾರದಲ್ಲಿ ಗೌಡರು ರಾಜಕೀಯ ಮಾಡ್ತಿದ್ದಾರೆ: ಸಿಎಂ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಗಣಿ ವಿಚಾರದಲ್ಲಿ ಗೌಡರು ರಾಜಕೀಯ ಮಾಡ್ತಿದ್ದಾರೆ: ಸಿಎಂ
ಆಂಧ್ರ ಹಾಗೂ ಕರ್ನಾಟಕ ಗಡಿ ವಿವಾದದ ಕುರಿತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಆರೋಪಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿರುವ ಅವರು, ಹಿರಿಯ ರಾಜಕಾರಣಿಯಾಗಿರುವ ಗೌಡರು ಈ ರೀತಿಯ ಹೇಳಿಕೆ ನೀಡುವುದು ಅವರಿಗೆ ಶೋಭೆಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬುಧವಾರ ರಾಯಚೂರಿನ ಮಕ್ಕಿನಗರದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶಕ್ಕೆ ಆಗಮಿಸಿದ್ದ ವೇಳೆಯಲ್ಲಿ ಮಾಧ್ಯಮವೊಂದರ ಜತೆ ಮಾತನಾಡಿದ ಅವರು, ಆಂಧ್ರ ಮತ್ತು ಕರ್ನಾಟಕ ಗಡಿ ಸಮೀಕ್ಷೆಗೆ ಸರಕಾರ ಸಿದ್ದವಿರುವುದಾಗಿ ಹೇಳಿದ್ದಾರೆ.

ಗಣಿ ವಿಚಾರದಲ್ಲಿ ದೇವೇಗೌಡರು ರಾಜಕೀಯ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದ ಮುಖ್ಯಮಂತ್ರಿಗಳು ಗೌಡರ ಆರೋಪದಲ್ಲಿ ಹುರುಳಿಲ್ಲ ಎಂದು ತಿಳಿಸಿದರು.

ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಆಂಧ್ರದ ಮುಖ್ಯಮಂತ್ರಿ ವೈ.ಎಸ್.ರಾಜಶೇಖರ ರೆಡ್ಡಿ ಅವರು ಶಾಮೀಲಾಗಿ ಬಳ್ಳಾರಿ ಗಡಿಭಾಗದಲ್ಲಿ 36ಕಿ.ಮೀ.ಉದ್ದಕ್ಕೂ ಮುಕ್ಕಾಲು ಕಿ.ಮೀ.ಅಗಲದ ಅಮೂಲ್ಯ ಅದಿರು ಭೂಮಿಯನ್ನು ಆಂಧ್ರಕ್ಕೆ ನಕಲಿ ದಾಖಲೆಗಳಿಂದ ಗಣಿಗಾರಿಕೆ ನಡೆಸುತ್ತಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಗೌಡರು ಆರೋಪಿಸಿದ್ದರು.

ಗಡಿ ಒತ್ತುವರಿ ಬಗ್ಗೆ ರಾಜ್ಯಪಾಲರು, ರಾಷ್ಟ್ರಪತಿಗಳಿಗೆ ದೂರು ನೀಡುವುದಾಗಿ ದೇವೇಗೌಡರು ಗುಡುಗಿದ್ದು, ಗಣಿಧಣಿಗಳೊಂದಿಗೆ ಮುಖ್ಯಮಂತ್ರಿಗಳು ನೇರವಾಗಿ ಶಾಮೀಲಾಗಿರುವುದಾಗಿ ಅವರು ಗಂಭೀರವಾಗಿ ದೂರಿದ್ದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ವರ್ಣರಂಜಿತ ಅಮೃತಮಹೋತ್ಸವಕ್ಕೆ ತೆರೆ
ಬಿಜೆಪಿ ಅಧಿಕಾರಕ್ಕೇರಿದರೆ ಪೋಟಾ ಜಾರಿ: ವೆಂಕಯ್ಯ ನಾಯ್ಡು
ನೀತಿ ಸಂಹಿತೆ ಬಗ್ಗೆ ಪೊಲೀಸರಿಗೆ ತರಬೇತಿ
ಅಪರಾಧಿಗಳ ಸ್ಪರ್ಧೆಗೆ ಅವಕಾಶವಿಲ್ಲ: ಚು. ಆಯೋಗ
ಅಮೃತಮಹೋತ್ಸವಕ್ಕೆ ಇಂದು ತೆರೆ
ಆಡ್ವಾಣಿಗೆ ಪ್ರಧಾನಿ ಯೋಗ್ಯತೆ ಇಲ್ಲ: ದೇಶಪಾಂಡೆ