ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಬೆಂಗಳೂರು ಸರಣಿ ಸ್ಫೋಟದ ರೂವಾರಿ ಓಮನ್‌ನಲ್ಲಿ ಸೆರೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಬೆಂಗಳೂರು ಸರಣಿ ಸ್ಫೋಟದ ರೂವಾರಿ ಓಮನ್‌ನಲ್ಲಿ ಸೆರೆ
ಬೆಂಗಳೂರು ಸರಣಿ ಸ್ಫೋಟದ ರೂವಾರಿ ಓಮನ್‌‌‌ನಲ್ಲಿ ಸಿಕ್ಕಿಬಿದಿದ್ದಾನೆ. ಕೇರಳ ಮೂಲದ ಹುರ್ಫರ್ ನವಾಜ್(32) ಎಂಬ ಶಂಕಿತ ಉಗ್ರ ಸೆರೆ ಸಿಕ್ಕ ವ್ಯಕ್ತಿಯಾಗಿದ್ದಾನೆ.

ಈತ ಸಿಮಿ ಕಾರ್ಯಕರ್ತನಾಗಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸುವ ನಿಟ್ಟಿನಲ್ಲಿ ಈ ಕೃತ್ಯ ಎಸಗಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಉತ್ತರ ಪ್ರದೇಶದ ಅಲಿಗಡ್ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಈತ ಪಾಕಿಸ್ತಾನದ ಲಷ್ಕರ್ ಸಂಘಟನೆಯೊಂದಿಗೆ ಸಂಪರ್ಕ ಸಾಧಿಸಿದ್ದಾನೆ ಹೊರತು ದುಷ್ಕೃತ್ಯಗಳ ಬಗ್ಗೆ ತರಬೇತಿ ಪಡೆದಿಲ್ಲ. ಜಿಹಾದಿ ಬಗ್ಗೆ ಮಂತ್ರ ಜಪ ಮಾಡುವುದೇ ಈತನ ಕೆಲಸವಾಗಿತ್ತು ಎನ್ನುತ್ತಾರೆ ಹಿರಿಯ ಪೊಲೀಸ್ ಅಧಿಕಾರಿಗಳು.

ನವಾಜ್‌ಗೆ ಚಿಕ್ಕ ವಯಸ್ಸಿನಿಂದಲೇ ಸಿಮಿ ಸಂಘಟನೆ ಸಹವಾಸವಿತ್ತು, ಈತನ ಚಿಕ್ಕಪ್ಪ ಒಬ್ಬರು ಸಿಮಿ ಸಂಘಟನೆಯಲ್ಲಿ ಪ್ರಮುಖ ಹುದ್ದೆಯಲ್ಲಿ ಕೆಲಸ ಮಾಡುತ್ತಿದ್ದರು. ಹಾಗಾಗಿ ನವಾಜ್ ಕೂಡ ಸಿಮಿ ಸಂಘಟನೆಯ ಸಂಪರ್ಕ ಸಾಧಿಸಲು ಸಾಧ್ಯವಾಗಿತ್ತು ಎಂದು ಹೆಸರು ಹೇಳಲಿಚ್ಚಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಬೆಂಗಳೂರು, ಓಮನ್, ಕೇರಳ, ನವಾಜ್, ಸಿಮಿ
ಮತ್ತಷ್ಟು
ನಿರ್ಮಲಾ ವೆಂಕಟೇಶ್‌ ಬಿಜೆಪಿಗೆ ಸೇರ್ಪಡೆ
ಮಾಜಿ ಪ್ರಧಾನಿ ದೇವೇಗೌಡ ಹಾಸನದಿಂದ ಸ್ಪರ್ಧೆ
ತೇಜಸ್ವಿನಿ-ಡಿಕೆಶಿ ಜಟಾಪಟಿ ಹೈಕಮಾಂಡ್ ಗಮನಿಸುತ್ತಿದೆ: ಖರ್ಗೆ
ವಿದ್ಯುತ್ ಕೊರತೆಗೆ ಕಾಂಗ್ರೆಸ್ ಕಾರಣ: ಯಡಿಯೂರಪ್ಪ
ಸಿಎಂ ಕುಟುಂಬ ರಾಜಕಾರಣ: ಬಿಜೆಪಿಯಲ್ಲಿ ಭಿನ್ನಮತ
ಒಕ್ಕಲಿಗ ಜನಾಂಗಕ್ಕೆ ಅನ್ಯಾಯವಾಗುತ್ತಿದೆ: ನಂಜಾವಧೂತ