ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > 'ಸರಸ್' ವಿಮಾನ ದುರಂತ-ಮೂವರು ಸಜೀವ ದಹನ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
'ಸರಸ್' ವಿಮಾನ ದುರಂತ-ಮೂವರು ಸಜೀವ ದಹನ
'ಸರಸ್' ಲಘು ವಿಮಾನವೊಂದು ಆಕಸ್ಮಿಕವಾಗಿ ನೆಲಕ್ಕಪ್ಪಳಿಸಿ ಬೆಂಕಿ ಹಿಡಿದ ಪರಿಣಾಮ ವಿಂಗ್ ಕಮಾಂಡರ್ ಪ್ರವೀಣ್ ಸೇರಿದಂತೆ ಮೂರು ಮಂದಿ ಜೀವಂತವಾಗಿ ದಹನವಾದ ಘಟನೆ ಮೆಗಾಸಿಟಿ ಲೇಔಟ್‌ನ ಶೇಷಗಿರಿಹಳ್ಳಿ ಬಳಿ ಶುಕ್ರವಾರ ಮಧ್ನಾಹ್ನ ಸಂಭವಿಸಿದೆ.

ಶೇಷಗಿರಿಹಳ್ಳಿ ಸಮೀಪ ಇಂದು ಮಧ್ನಾಹ್ನ ಸರಸ್ ಬಹುಪಯೋಗಿ ಲಘು ವಿಮಾನ ಏಕಾಏಕಿ ಭಾರೀ ಶಬ್ದದೊಂದಿಗೆ ನೆಲಕ್ಕಪ್ಪಳಿಸಿ ಬೆಂಕಿ ಹೊತ್ತಿಕೊಂಡ ಪರಿಣಾಮ ವಿಮಾನದಲ್ಲಿದ್ದ ಮೂವರು ಸಜೀವವಾಗಿ ಸಾವನ್ನಪ್ಪಿರುವುದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಪರೀಕ್ಷಾರ್ಥ ಹಾರಾಟ ನಡೆಸುತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಆದರೆ ವಿಮಾನದಲ್ಲಿ ಎಷ್ಟು ಮಂದಿ ಇದ್ದಾರೆ ಎಂಬ ಬಗ್ಗೆ ಖಚಿತ ಮಾಹಿತಿ ಲಭಿಸಿಲ್ಲ. ಅಪಘಾತಕ್ಕೆ ಕಾರಣ ಏನು ಎಂಬ ಬಗ್ಗೆಯೂ ತಿಳಿದು ಬಂದಿಲ್ಲ.

ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿರುವುದಾಗಿ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಕಾಂಗ್ರೆಸ್ ಭಿನ್ನಮತದಿಂದ ಬಿಜೆಪಿ ಅಧಿಕಾರಕ್ಕೆ: ದೇಶಪಾಂಡೆ
ಖುರೇಶಿ ವಜಾಕ್ಕೆ ಬಿಜೆಪಿ ಕಾರ್ಯಕರ್ತರ ಆಗ್ರಹ
ಬಿಜೆಪಿಯೂ ಅಪ್ಪ-ಮಕ್ಕಳ ಪಕ್ಷ: ಕುಮಾರಸ್ವಾಮಿ
ನಿಮ್ಮನ್ನು ಯಾಕೆ ತಡಿಬಾರ್ದು: ಮುತಾಲಿಕ್‌‌ಗೆ ನೋಟಿಸ್
ಯಡಿಯೂರಪ್ಪ-ಅನಂತ್ ಕುಮಾರ್ ನಡುವೆ ಜಟಾಪಟಿ
ಬುರ್ಖಾ ಧರಿಸಲು ಅಡ್ಡಿ ಸರಿಯಲ್ಲ: ಪ್ರೊ.ಮುಮ್ತಾಜ್