ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಅನಂತ್ ಕುಮಾರ್‌ಗೂ ಸೀಟು ಹಂಚಿಕೆ ಹೊಣೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಅನಂತ್ ಕುಮಾರ್‌ಗೂ ಸೀಟು ಹಂಚಿಕೆ ಹೊಣೆ
ರಾಜ್ಯ ಬಿಜೆಪಿಯಲ್ಲಿ ಯಡಿಯೂರಪ್ಪ ಬಣದ ಮೇಲಾಟದಿಂದ ತೀವ್ರ ಅಸಮಾಧಾನಿತರಾಗಿದ್ದ ಸಂಸದ ಅನಂತ್ ಕುಮಾರ್ ಅವರಿಗೆ ಹಳೆ ಮೈಸೂರು ಪ್ರಾಂತ್ಯದ ಎಂಟು ಲೋಕಸಭಾ ಕ್ಷೇತ್ರಗಳ ಸೀಟು ಹಂಚುವಿಕೆ ಹೊಣೆಯನ್ನು ನೀಡಲು ತೀರ್ಮಾನಿಸಲಾಗಿದೆ ಎನ್ನಲಾಗಿದೆ.

ಅನಂತ್ ಮತ್ತು ಯಡಿಯೂರಪ್ಪ ಬಣಗಳ ನಡುವಿನ ಗುದ್ದಾಟ ತಾರಕಕ್ಕೇರಿರುವ ಹಿನ್ನೆಲೆಯಲ್ಲಿ ರಾಜೀ ಸೂತ್ರವೆಂಬಂತೆ ಈ ನಿರ್ಧಾರಕ್ಕೆ ಬರಲಾಗಿದೆ. ಈಗಾಗಲೇ ಪ್ರಕಟಿಸಿರುವ 20 ಅಭ್ಯರ್ಥಿಗಳ ಪಟ್ಟಿಯನ್ನು ಬದಲಿಸುವ ಬದಲಿಗೆ ಬಾಕಿ ಉಳಿದಿರುವ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆಯನ್ನು ಅವರಿಗೆ ಒಪ್ಪಿಸಲಾಗಿದೆ ಎಂದು ಮೂಲಗಳು ಹೇಳಿವೆ.

ಹಳೆಯ ನಾಯಕರನ್ನು ಮ‌ೂಲೆ ಗುಂಪುಮಾಡಿ ಹೊಸಬರಿಗೆ ಮಣೆಹಾಕಲಾಗುತ್ತದೆ ಎಂಬುದಾಗಿ ಪಕ್ಷದೊಳಗೆ ತೀವ್ರ ಭಿನ್ನಮತ ಭುಗಿಲೆದ್ದ ಹಿನ್ನೆಲೆಯಲ್ಲಿ ಗುರುವಾರ ಸಂಧಾನ ಸಭೆಯನ್ನು ನಡೆಸಲಾಗಿದ್ದು, ಭಿನ್ನಮತಕ್ಕೆ ತಾತ್ಕಾಲಿಕವಾಗಿ ತೇಪೆ ಹಚ್ಚಲಾಗಿದೆ. ಪರಿಣಾಮ ಎಲ್ಲರೂ ಜತೆಯಾಗಿ ಚುನಾವಣೆಗೆ ತೆರಳಲು ಉಭಯ ಬಣಗಳು ನಿರ್ಧರಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಬಿಜೆಪಿ ಬಂಡಾಯ: ಸಿಎಂ ಸಂಧಾನ ಯಶಸ್ವಿ
ಎಡ, ಪ್ರಾದೇಶಿಕ ಪಕ್ಷಗಳಿಂದ 'ತೃತೀಯ ಶಕ್ತಿ'ಗೆ ಚಾಲನೆ
ವಿದ್ಯುತ್ ಸಮಸ್ಯೆಯಿಂದ ನೀರಿಗೆ ಅಭಾವ: ಶೋಭಾ
ತರಾತುರಿಯಲ್ಲಿ ದೀಪಬೆಳಗಿ ಉದ್ಘಾಟಿಸಿದ ಗೌಡರು
ಹಾವೇರಿ: ಮೆರವಣಿಗೆ ವಿವಾದ, ನಿಷೇದಾಜ್ಞೆ ಜಾರಿ
ಚುನಾವಣೆ: ಮ‌ೂರು ಜಿಲ್ಲಾಧಿಕಾರಿಗಳ ಎತ್ತಂಗಡಿ