ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > 28 ಕ್ಷೇತ್ರಗಳಲ್ಲಿಯೂ ಜೆಡಿಎಸ್ ಸ್ಪರ್ಧೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
28 ಕ್ಷೇತ್ರಗಳಲ್ಲಿಯೂ ಜೆಡಿಎಸ್ ಸ್ಪರ್ಧೆ
ಕೆಲವು ಕ್ಷೇತ್ರಗಳಿಗೆ ಸ್ಪರ್ಧಿಸಬಾರದೆಂಬ ನಿಲುವಿನಿಂದ ಹಿಂದೆ ಸರಿದಿರುವ ಜೆಡಿಎಸ್ ಎಲ್ಲಾ 28 ಕ್ಷೇತ್ರಗಳಲ್ಲಿಯೂ ತನ್ನ ಅಭ್ಯರ್ಥಿಗಳನ್ನು ನಿಲ್ಲಿಸುವ ತೀರ್ಮಾನಕ್ಕೆ ಬಂದಿರುವುದಾಗಿ ತಿಳಿಸಿದೆ.

ಬೆಂಗಳೂರು ಕೇಂದ್ರ ಅಥವಾ ಉತ್ತರದಲ್ಲಿ ಸ್ಪರ್ಧಿಸಲಿರುವ ಸಿ.ಕೆ. ಜಾಫರ್ ಷರೀಪ್, ಶಿವಮೊಗ್ಗದಲ್ಲಿ ಎಸ್. ಬಂಗಾರಪ್ಪ, ಉತ್ತರ ಕನ್ನಡದಲ್ಲಿ ಮಾರ್ಗರೇಟ್ ಆಳ್ವ ಹಾಗೂ ಬೀದರ್‌‌ನಲ್ಲಿ ಧರ್ಮಸಿಂಗ್ ಸ್ಪರ್ಧಿಸಿದರೆ, ಆ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ನಿಲ್ಲಿಸದಿರಲು ತೀರ್ಮಾನಿಸಿತ್ತು. ಆದರೆ ತೃತೀಯ ರಂಗದ ಸಮಾವೇಶದ ಬಳಿಕ ಪಕ್ಷದ ಕಾರ್ಯಕರ್ತರ ಉತ್ಸಾಹ, ಕೆಲ ವಿಚಾರಗಳಲ್ಲಿ ಕಾಂಗ್ರೆಸ್ ಮುಖಂಡರ ನಿರ್ಲಕ್ಷ್ಯ ಧೋರಣೆಯಿಂದ ತಿರುಗೇಟು ನೀಡಲು ನಿರ್ಧರಿಸಿರುವ ಜೆಡಿಎಸ್ ಎಲ್ಲಾ ಕ್ಷೇತ್ರಗಳಲ್ಲಿಯೂ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿದೆ.

ಈ ನಡುವೆ ತೃತೀಯ ರಂಗದ ನಾಯಕರಿಗೆ ಏರ್ಪಡಿಸಿರುವ ಔತಣಕೂಟದಲ್ಲಿ ಭಾಗವಹಿಸುವ ಸಲುವಾಗಿ ದೆಹಲಿಗೆ ತೆರಳಿರುವ ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡ ಸೋಮವಾರದಂದು ವಾಪಸಾಗಲಿದ್ದಾರೆ. ಆ ಬಳಿಕ ಮಾರ್ಚ್ 17 ಮತ್ತು 18ರಂದು ಬೆಂಗಳೂರಿನಲ್ಲಿ ಸಭೆ ನಡೆಸಿ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸಲಿದ್ದಾರೆ.

ಅದಕ್ಕೂ ಮೊದಲು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಕೆಲವು ಜಿಲ್ಲಾ ಮುಖಂಡರ ಜತೆ ಸಭೆ ನಡೆಸಿ ಸಂಭವನೀಯ ಅಭ್ಯರ್ಥಿಗಳ ಕುರಿತು ಮಾಹಿತಿ ಪಡೆಯಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಜೆಡಿಎಸ್, ದೇವೇಗೌಡ, ಕುಮಾರಸ್ವಾಮಿ
ಮತ್ತಷ್ಟು
ಸುಪ್ರೀಂಕೋರ್ಟ್ ಆದೇಶ ಉಲ್ಲಂಘಿಸಿದ ಸರ್ಕಾರ
ಮಾ.23: ಕಾಂಗ್ರೆಸ್ ಅಧಿಕೃತ ಪ್ರಚಾರಕ್ಕೆ ಚಾಲನೆ
ಕಾಂಗ್ರೆಸ್‌ಗೆ ಮರಳಿದ 'ಸಮಾಜವಾದಿ' ಬಂಗಾರಪ್ಪ
ಅಂಬರೀಷ್‌ಗೆ ಗಾಳ ಹಾಕುತ್ತಿರುವ ಬಿಜೆಪಿ
ರಾಜಕೀಯ ಆತ್ಮಹತ್ಯೆ ಮಾಡಿಕೊಳ್ಳದಿರಿ: ಕಟ್ಟಾ
ಬಳ್ಳಾರಿ: ಬಿಜೆಪಿ ಪರ ಪ್ರಚಾರಕ್ಕೆ ಪಾರಿವಾಳಗಳು