ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಬಿಜೆಪಿಯಲ್ಲಿ ಭಿನ್ನಮತವೇ ಇಲ್ಲ: ವೆಂಕಯ್ಯ ನಾಯ್ಡು
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಬಿಜೆಪಿಯಲ್ಲಿ ಭಿನ್ನಮತವೇ ಇಲ್ಲ: ವೆಂಕಯ್ಯ ನಾಯ್ಡು
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್‌‌ಸಿಂಗ್ ಮತ್ತು ಅರುಣ್ ಜೇಟ್ಲಿ ನಡುವೆ ಯಾವುದೇ ಭಿನ್ನಮತ ಇಲ್ಲ. ಜೇಟ್ಲಿ ಎತ್ತಿರುವ ವಿಷಯಗಳ ಬಗ್ಗೆ ಪಕ್ಷ ಪರಿಶೀಲನೆ ನಡೆಸುತ್ತಿದೆ. ಇದನ್ನೇ ಭಿನ್ನಮತ ಎಂದು ಬಿಂಬಿಸುವುದು ಸರಿಯಲ್ಲ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ವೆಂಕಯ್ಯ ನಾಯ್ಡು ತಿಳಿಸಿದರು.

ಚುನಾವಣೆ ಸಿದ್ಧತೆಯಲ್ಲಿ ಜೇಟ್ಲಿ ಸಕ್ರಿಯರಾಗಿದ್ದಾರೆ. ಚುನಾವಣಾ ನಿರ್ವಹಣಾ ಸಮಿತಿ ಸಭೆಗೆ ನಾಲ್ಕು ಬಾರಿ ಹಾಜರಾಗಿದ್ದಾರೆ ಎಂದು ಅವರು ಹೇಳಿದರು.

ರಾಜ್ಯ ಕಾಂಗ್ರೆಸ್‌‌ನಲ್ಲಿ ಚುನಾವಣಾ ಕಣಕ್ಕಿಳಿಯಲು ಅಭ್ಯರ್ಥಿಗಳು ಹಿಂದೇಟು ಹಾಕುತ್ತಿದ್ದಾರೆ. ಬಿಜೆಪಿ ವಿರುದ್ಧ ಸ್ಪಧಿಸುವುದು ಆ ಪಕ್ಷಗಳಿಗೆ ಕಷ್ಟವಾಗಿದೆ. ಯಡಿಯೂರಪ್ಪ ನೇತೃತ್ವದ ಸರ್ಕಾರದ ಸಾಧನೆಯನ್ನು ಜನ ಮೆಚ್ಚಿರುವುದೇ ಇದಕ್ಕೆ ಕಾರಣವಾಗಿದೆ ಎಂದರು.

ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್ ಬೆಂಗಳೂರು ದಕ್ಷಿಣ ಕ್ಷೇತ್ರದಿಂದಲೇ ಸ್ಪರ್ಧಿಸಲಿದ್ದಾರೆ. ಅವರು ಕ್ಷೇತ್ರ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ಆ ಕ್ಷೇತ್ರದ ಜನತೆ ಕಳೆದ ನಾಲ್ಕು ಅವಧಿಯಿಂದ ಅನಂತ್ ಕುಮಾರ್ ಅವರನ್ನು ಸಂಸತ್ತಿಗೆ ಕಳುಹಿಸುತ್ತಾ ಬಂದಿದ್ದಾರೆ. ಈ ಬಾರಿಯೂ ಕಳುಹಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಜೆಡಿಎಸ್ ಪಾಳಯಕ್ಕೆ 'ರೆಬೆಲ್'ಸ್ಟಾರ್ ಅಂಬರೀಶ್?
ಕುಮಾರಸ್ವಾಮಿ ವಿರುದ್ಧ ಆಯೋಗಕ್ಕೆ ದೂರು: ಸಿಎಂ
ಅಭ್ಯರ್ಥಿಗಳೊಂದಿಗೆ ಒಳ ಒಪ್ಪಂದ ಮಾಡಿಕೊಳ್ಳಬೇಡಿ: ಸಿಎಂ
'ಇನಿಯಾ' ಚಿತ್ರತಂಡದ ಮೇಲೆ ಪೊಲೀಸ್ ಲಾಠಿ ಪ್ರಹಾರ!
ಗೋವಾಕ್ಕೂ ಹೋಗ್ತೆನೆ-ತಾಕತ್ತಿದ್ದರೆ ತಡೆಯಲಿ: ಮುತಾಲಿಕ್
ಅಂಗಡಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ: ವಿದ್ಯಾಶಂಕರ್