ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಬೆಂಗಳೂರು ಮೇಲೆ ಮತ್ತೆ ಉಗ್ರರ ಕರಿನೆರಳು
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಬೆಂಗಳೂರು ಮೇಲೆ ಮತ್ತೆ ಉಗ್ರರ ಕರಿನೆರಳು
ಲೋಕಸಭಾ ಚುನಾವಣೆ ಘೋಷಣೆಯಾಗಿದ್ದು, ರಾಜ್ಯದ ರಾಜಧಾನಿಯ ಮೇಲೆ ಭಯೋತ್ಪಾದಕರ ಕರಿ ನೆರಳು ಆವರಿಸಿರುವ ಬಗ್ಗೆ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿರುವುದಾಗಿ ಗೃಹ ಸಚಿವ ವಿ.ಎಸ್.ಆಚಾರ್ಯ ತಿಳಿಸಿದ್ದಾರೆ.

ಬೆಂಗಳೂರಿನ ಮೇಲೆ ಉಗ್ರಗಾಮಿಗಳ ಕರಿನೆರಳು ದಟ್ಟವಾಗಿದ್ದು, ವಿಧಾನಸೌಧ, ಹೈಕೋರ್ಟ್ ಮತ್ತು ಪ್ರಮುಖ ಎರಡು ಆಸ್ಪತ್ರೆಗಳು ಉಗ್ರರ ಹಿಟ್ ಲಿಸ್ಟ್‌‌ನಲ್ಲಿವೆ ಎಂಬ ಆಘಾತಕಾರಿ ಅಂಶವನ್ನು ಕೇಂದ್ರೀಯ ಗುಪ್ತಚರ ದಳ ರಾಜ್ಯ ಸರ್ಕಾರಕ್ಕೆ ರವಾನಿಸಿದೆ.

ಶುಕ್ರವಾರ ಸಚಿವ ಆಚಾರ್ಯ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತ, ದಾಳಿ ಸಾಧ್ಯತೆ ಕುರಿತು ಕೇಂದ್ರ ಗುಪ್ತಚರ ಪಡೆಯಿಂದ ರಾಜ್ಯಕ್ಕೆ ಎಚ್ಚರಿಕೆ ಬಂದಿದೆ ಎಂದರು. ತೀರ ಇತ್ತೀಚೆಗೆ ಮಾ.13ರಂದು ವಿಧಾನಸೌಧ, ಹೈಕೋರ್ಟ್ ಹಾಗೂ ಪ್ರಮುಖ ಆಸ್ಪತ್ರೆಗಳ ಮೇಲೆ ಉಗ್ರರ ದಾಳಿ ನಡೆಯುವ ಸಾಧ್ಯತೆ ಇದೆ ಎಂಬ ಎಚ್ಚರಿಕೆ ಬಂದಿತ್ತು. ದಾಳಿಯನ್ನು ಎದುರಿಸಲು ರಾಜ್ಯ ಪೊಲೀಸ್ ಪಡೆ ಸರ್ವ ಸನ್ನದ್ಧ ಸ್ಥಿತಿಯಲ್ಲಿದೆ ಎಂದು ಹೇಳಿದರು.

ನಗರದ ಮೇಲೆ ಉಗ್ರರ ದಾಳಿಯ ಭೀತಿ ಅವ್ಯಾಹತವಾಗಿದ್ದು, ಕೇಂದ್ರ ಗುಪ್ತಚರ ಪಡೆಯು ಆಗಾಗ ಇಂತಹ ಎಚ್ಚರಿಕೆ ನೀಡುತ್ತಿದೆ. ಬೆಂಗಳೂರಿನ ಕೆಲವು ವ್ಯಕ್ತಿಗಳು ಹಾಗೂ ಪ್ರಮುಖ ಸ್ಥಾವರಗಳನ್ನು ಗುರಿಯಾಗಿರಿಸಿ ಭಯೋತ್ಪಾದಕರ ದಾಳಿ ನಡೆಯುವ ಸಾಧ್ಯತೆಯಿದ್ದು, ಅದನ್ನು ಸಮರ್ಥವಾಗಿ ಎದುರಿಸಲು ಎಲ್ಲಾ ಸಿದ್ದತೆ ಮಾಡಲಾಗಿದೆ ಎಂದು ವಿವರಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಸ್ವ ಇಚ್ಚೆಯಿಂದ ಸಮಾಜೋತ್ಸವಕ್ಕೆ ಹೋಗಿದ್ದೆ: ಆಚಾರ್ಯ
'ನೈಸ್' ಖೇಣಿ ವಿರುದ್ಧ ಸ್ಪರ್ಧೆಗೆ ಸಿದ್ದ: ದೇವೇಗೌಡ ಸವಾಲ್
ಎನ್‌‌ಎಸ್‌‌ಜಿ ಇಲ್ಲ-ಎಟಿಎಸ್ ರಚನೆಗೆ ಚಿದು ಅಭಯ
ಅಂಗಡಿಗೆ ಟಿಕೆಟ್ ನೀಡಿದ್ರೆ ಉಗ್ರ ಪ್ರತಿಭಟನೆ: ಕರವೇ
ಯಡಿಯೂರಪ್ಪ ಸರ್ಕಾರದಿಂದ ವಿಶ್ವಮಟ್ಟದಲ್ಲಿ ಕೆಟ್ಟ ಹೆಸರು: ಕಾಂಗ್ರೆಸ್
ಯಡಿಯೂರಪ್ಪ-ಅನಂತ್ ಕಳ್ಳ-ಮಳ್ಳರಿದ್ದಂಗೆ: ಎಚ್‌ಡಿಕೆ