ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಗದಗ್‌ನಲ್ಲಿ 76ನೇ ಕನ್ನಡ ಸಾಹಿತ್ಯ ಸಮ್ಮೇಳನ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಗದಗ್‌ನಲ್ಲಿ 76ನೇ ಕನ್ನಡ ಸಾಹಿತ್ಯ ಸಮ್ಮೇಳನ
76ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉತ್ತರ ಕರ್ನಾಟಕದ ಗದಗದಲ್ಲಿ ನಡೆಸಲು ಕನ್ನಡ ಸಾಹಿತ್ಯ ಪರಿಷತ್ ನಿರ್ಧರಿಸಿದೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಸಾಪದ ಅಧ್ಯಕ್ಷ ನಲ್ಲೂರು ಪ್ರಸಾದ್, ಗದಗ್‌ನಲ್ಲಿ 76ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಒಮ್ಮತಾಭಿಪ್ರಾಯದಿಂದ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಇತ್ತೀಚೆಗಷ್ಟೇ ಚಿತ್ರದುರ್ಗದಲ್ಲಿ 75ನೇ ಅಖಿಲ ಕನ್ನಡ ಸಾಹಿತ್ಯ ಸಮ್ಮೇಳನ ಡಾ.ಎಲ್.ಬಸವರಾಜು ಅವರ ಅಧ್ಯಕ್ಷತೆಯಲ್ಲಿ ನಡೆದಿತ್ತು. ಮಠ,ಮಠಾಧೀಶರ ವಿರುದ್ಧ ಕಿಡಿಕಾರಿದ್ದ ಎಲ್‌ಬಿ ಅವರ ಅಧ್ಯಕ್ಷೀಯ ಮಾತು ಸಾಕಷ್ಟು ವಿವಾದಕ್ಕೆ ಗ್ರಾಸ ಒದಗಿಸಿತ್ತು. ಸಮ್ಮೇಳನದಲ್ಲಿ ಸಾಕಷ್ಟು ಅವ್ಯವಸ್ಥೆ ನಡೆಯುವ ಮೂಲಕ ನಲ್ಲೂರು ಪ್ರಸಾದ್ ಅವರ ವಿರುದ್ಧ ಪ್ರತಿಭಟನೆಯನ್ನು ಕೂಡ ನಡೆದಿತ್ತು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಹಿಂದೂ ಸಮಾಜೋತ್ಸವ ತಡೆಯಲು ಸಾಧ್ಯವಿಲ್ಲ: ರವಿ
ರಾಜ್ಯವನ್ನು ಬಿಜೆಪಿ ಅರಾಜಕತೆಯತ್ತ ದೂಡಿದೆ: ಉಗ್ರಪ್ಪ
ಕಾಂಗ್ರೆಸ್ ಜತೆ ಒಳ ಒಪ್ಪಂದ ಇಲ್ಲ: ಗೌಡ
ಪ್ರಧಾನಿಯಾಗಿದ್ದು ಈಶ್ವರನ ಲೀಲೆ: ದೇವೇಗೌಡ
ಉಲ್ಟಾ ಹೊಡೆದ ಎಸ್.ಎಂ.ಕೃಷ್ಣ-ಲೋಕಸಭೆಗೆ ಸ್ಪರ್ಧಿಸಲಾರೆ
ಬಿಜೆಪಿಯವರೆಲ್ಲ ಚಿರಯೌವನಿಗರೇ?: ವಿ.ಎಸ್.ಉಗ್ರಪ್ಪ