ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ನೀತಿ ಸಂಹಿತೆ ಉಲ್ಲಂಘಿಸಿಲ್ಲ: ಯಡಿಯೂರಪ್ಪ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ನೀತಿ ಸಂಹಿತೆ ಉಲ್ಲಂಘಿಸಿಲ್ಲ: ಯಡಿಯೂರಪ್ಪ
ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸುವ ಯಾವುದೇ ಸಭೆಯಲ್ಲಿ ತಾನು ಭಾಗವಹಿಸಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಮುಖ್ಯಚುನಾವಣಾ ಆಯುಕ್ತ ಎನ್.ಗೋಪಾಲಸ್ವಾಮಿ ಅವರು ಮಂಗಳವಾರ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ, ಹುಬ್ಬಳ್ಳಿಯಲ್ಲಿ ಪಕ್ಷದ ಪ್ರಚಾರ ಸಭೆಯಲ್ಲಿ ತಡರಾತ್ರಿಯವರೆಗೂ ಭಾಗವಹಿಸಿರುವುದು ಮೇಲ್ನೋಟಕ್ಕೆ ಸಾಬೀತಾಗಿದ್ದು, ಅವರ ವಿರುದ್ಧ ಕ್ರಮ ಜರಗಿಸಲಾಗುವುದು ಎಂದು ತಿಳಿಸಿದ್ದರು.

ಆದರೆ ತಾನು ಹುಬ್ಬಳ್ಳಿಯಲ್ಲಿ ಪಕ್ಷದ ಹಿತೈಷಿಗಳೊಂದಿಗೆ ನಡೆಸಲಾದ ಸಭೆಯಲ್ಲಿ ಭಾಗವಹಿಸಿದ್ದೆ, ಅದು ಚುನಾವಣಾ ಪ್ರಚಾರ ಆಗಿರಲಿಲ್ಲ, ಈ ಸಂಬಂಧ ಮುಖ್ಯ ಚುನಾವಣಾ ಆಯುಕ್ತರು ತಮ್ಮ ಬಗ್ಗೆ ನಿಗಾ ಇರಿಸುವಂತೆ ಸೂಚಿಸಿರುವುದು ಸರಿಯಲ್ಲ ಎಂದು ಯಡಿಯೂರಪ್ಪ ತಿಳಿಸಿದರು.

ತಮ್ಮ ಬಗ್ಗೆ ಚುನಾವಣಾ ಆಯೋಗಕ್ಕೆ ಇರುವ ಅನುಮಾನಗಳನ್ನು ಪತ್ರ ಬರೆದು ಸರಿಪಡಿಸುವುದಾಗಿ ತಿಳಿಸಿದ ಯಡಿಯೂರಪ್ಪ ಮುಂದೆ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸದಂತೆ, ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಜಾಗೃತಿ ವಹಿಸುವುದಾಗಿ ಅವರು ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಗದಗ್‌ನಲ್ಲಿ 76ನೇ ಕನ್ನಡ ಸಾಹಿತ್ಯ ಸಮ್ಮೇಳನ
ಹಿಂದೂ ಸಮಾಜೋತ್ಸವ ತಡೆಯಲು ಸಾಧ್ಯವಿಲ್ಲ: ರವಿ
ರಾಜ್ಯವನ್ನು ಬಿಜೆಪಿ ಅರಾಜಕತೆಯತ್ತ ದೂಡಿದೆ: ಉಗ್ರಪ್ಪ
ಕಾಂಗ್ರೆಸ್ ಜತೆ ಒಳ ಒಪ್ಪಂದ ಇಲ್ಲ: ಗೌಡ
ಪ್ರಧಾನಿಯಾಗಿದ್ದು ಈಶ್ವರನ ಲೀಲೆ: ದೇವೇಗೌಡ
ಉಲ್ಟಾ ಹೊಡೆದ ಎಸ್.ಎಂ.ಕೃಷ್ಣ-ಲೋಕಸಭೆಗೆ ಸ್ಪರ್ಧಿಸಲಾರೆ