ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಏರ್ ಡೆಕ್ಕನ್‌‌ ಸಂಸ್ಥಾಪಕ ಕ್ಯಾ.ಗೋಪಿನಾಥ್ ಲೋಕಸಭಾ ಅಖಾಡಕ್ಕೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಏರ್ ಡೆಕ್ಕನ್‌‌ ಸಂಸ್ಥಾಪಕ ಕ್ಯಾ.ಗೋಪಿನಾಥ್ ಲೋಕಸಭಾ ಅಖಾಡಕ್ಕೆ
ಏರ್ ಡೆಕ್ಕನ್ ಸಂಸ್ಥಾಪಕ ಕ್ಯಾ.ಗೋಪಿನಾಥ್ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಇಚ್ಚೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುವ ಬಯಕೆ ವ್ಯಕ್ತಪಡಿಸಿರುವ ಅವರು, ಶೀಘ್ರದಲ್ಲೇ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎನ್ನುವುದನ್ನು ತಿಳಿಸುವುದಾಗಿ ಹೇಳಿದರು.

ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸ್ನೇಹಿತರು ಹಾಗೂ ಆಪ್ತರ ಸಲಹೆ ಮೇರೆಗೆ ಲೋಕಸಭೆಗೆ ಸ್ಪರ್ಧಿಸುವುದಾಗಿ ತಿಳಿಸಿದರು. ಯಾವುದೇ ರಾಷ್ಟ್ರೀಯ ಪಕ್ಷಗಳ ಚಿಹ್ನೆಯಡಿಯಲ್ಲಿ ಅಖಾಡಕ್ಕಿಳಿಯುವುದಿಲ್ಲ ಎಂದು ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.

ಎಲ್ಲಾ ರಾಜಕೀಯ ಪಕ್ಷಗಳು ಸ್ವಾರ್ಥ ರಾಜಕಾರಣ ಮಾಡುತ್ತಿರುವುದಾಗಿ ಅಭಿಪ್ರಾಯವ್ಯಕ್ತಪಡಿಸಿದ ಕ್ಯಾ.ಗೋಪಿನಾಥ್, ಪ್ರತಿಯೊಂದು ರಾಜಕೀಯ ಪಕ್ಷಗಳು ತತ್ವ, ಸಿದ್ದಾಂತಗಳನ್ನು ಗಾಳಿಗೆ ತೂರಿ, ಉದ್ಯಮಿಗಳೊಂದಿಗೆ, ಭ್ರಷ್ಟರೊಂದಿಗೆ, ಕ್ರಿಮಿನಲ್‌ಗಳ ಜತೆ ಕೈಜೋಡಿಸಿರುವುದಾಗಿ ಆಪಾದಿಸಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ರಾಜಧಾನಿಯಲ್ಲಿ ಹಾಡಹಗಲೇ ಮತ್ತೊಂದು ಕೊಲೆ
ನೀತಿ ಸಂಹಿತೆ ಅರಿತು ಕೆಲಸ ಮಾಡಿ: ಯಡಿಯೂರಪ್ಪ
ಎಸ್.ಎಂ.ಕೃಷ್ಣ-ಜಾಫರ್ ಷರೀಫ್ ಬಂಡಾಯದ ಬಾವುಟ?
ಬಳ್ಳಾರಿ: ಆಯೋಗದಿಂದ 5 ಅಧಿಕಾರಿಗಳ ಎತ್ತಂಗಡಿ
ಬಡವರು ಲ್ಯಾಪ್‌‌ಟಾಪ್ ತಗೊಂಡು ಉಪ್ಪಿನಕಾಯಿ ಹಾಕಿ ನೆಕ್ಕೋದಾ: ಸಿದ್ದು
ಸಾಯೋದ್ರೊಳಗೆ ಜೆಡಿಎಸ್ ಮತ್ತೆ ಅಧಿಕಾರಕ್ಕೆ: ದೇವೇಗೌಡ