ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಮಾನನಷ್ಟ ಮೊಕದ್ದಮೆ ವಜಾಗೊಳಿಸುವಂತೆ ಎಚ್‌ಡಿಕೆ ಕೋರ್ಟ್‌ಗೆ ಅರ್ಜಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಮಾನನಷ್ಟ ಮೊಕದ್ದಮೆ ವಜಾಗೊಳಿಸುವಂತೆ ಎಚ್‌ಡಿಕೆ ಕೋರ್ಟ್‌ಗೆ ಅರ್ಜಿ
ಮೇವರಿಕ್ ಲಂಚ ಆರೋಪ ಪ್ರಕರಣದ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪರವಾಗಿ ಸರ್ಕಾರ ತಮ್ಮ ವಿರುದ್ಧ ಹೂಡಿರುವ ಮಾನನಷ್ಟ ಮೊಕದ್ದಮೆಯನ್ನು ವಜಾಗೊಳಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಅದೇ ರೀತಿ ವೀರಶೈವ ಸ್ವಾಮೀಜಿಗಳ ವಿರುದ್ಧ ತಾವು ಅವಹೇಳನಕಾರಿಯಾಗಿ ಮಾತಾಡಿದ್ದೇನೆ ಎಂದು ಆರೋಪಿಸಿ ವಕೀಲ ಎನ್.ಪಿ.ಅಮೃತೇಶ್ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಯನ್ನೂ ವಜಾಗೊಳಿಸುವಂತೆ ಕೋರಿ ಪ್ರತ್ಯೇಕ ಅರ್ಜಿಯೊಂದನ್ನು ಸಲ್ಸಿಸಿದ್ದಾರೆ.

ಈ ಎರಡೂ ಅರ್ಜಿಗಳು ನ್ಯಾಯಮೂರ್ತಿ ಡಾ.ಕೆ.ಭಕ್ತವತ್ಸಲ ಅವರಿದ್ದ ಏಕಸದಸ್ಯ ಪೀಠದ ಮುಂದೆ ಬಂದಿದ್ದು, ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಲಾಗಿದೆ.

ಈ ಎರಡೂ ಪ್ರಕರಣಗಳಿಗೆ ಸಂಬಂಧಿಸಿದಂತೆ ಹೆಚ್ಚುವರಿ ಸಿಟಿ ಸಿವಿಲ್ ನ್ಯಾಯಾಲಯ ಎಚ್.ಡಿ.ಕುಮಾರಸ್ವಾಮಿಗೆ ಸಮನ್ಸ್ ಜಾರಿ ಮಾಡಿದ್ದು, ಏಪ್ರಿಲ್ ತಿಂಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶಿಸಿತ್ತು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಲೋಕಸಭೆ: ಜೆಡಿಎಸ್ ಪ್ರಥಮಪಟ್ಟಿ ಬಿಡುಗಡೆ
ಚಂದ್ರೇಗೌಡ ಭಿನ್ನಮತದ ಹಿಂದೆ ಹಿಡನ್ ಅಜೆಂಡಾ: ಡಿಕೆಶಿ
ಭಾರತ್ ನಿರ್ಮಾಣ್ ಹೆಸರು ಬಳಕೆ ವಿರುದ್ಧ ಬಿಜೆಪಿ ಕಿಡಿ
ಅನಂತಮೂರ್ತಿ ವಿರುದ್ಧ ಜಾಮೀನು ರಹಿತ ವಾರಂಟ್
ನಕ್ಸಲರ ಬಗ್ಗೆ ಮಾಹಿತಿ ನೀಡಿದ್ರೆ ಲಕ್ಷ ರೂ.ಇನಾಮು
ಡಿ.ಮಂಜುನಾಥ್‌ಗೆ ಟಿಕೆಟ್ ನೀಡಬೇಡಿ: ಮಾದಿಗ ಸಮಿತಿ