ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ದೇಶಪ್ರೇಮಿ-ದೇಶಭ್ರಷ್ಟರ ನಡುವಿನ ಹೋರಾಟ: ಸದಾನಂದ ಗೌಡ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ದೇಶಪ್ರೇಮಿ-ದೇಶಭ್ರಷ್ಟರ ನಡುವಿನ ಹೋರಾಟ: ಸದಾನಂದ ಗೌಡ
ಮುಂಬರುವ ಲೋಕಸಭಾ ಚುನಾವಣೆ ದೇಶಪ್ರೇಮಿ ಹಾಗೂ ದೇಶಭ್ರಷ್ಟರ ನಡುವಿನ ಹೋರಾಟವಾಗಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ವಿ.ಸದಾನಂದ ಗೌಡ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅವರು ಉಡುಪಿ ಕುಂಜಿಬೆಟ್ಟು ಕಚೇರಿಯಲ್ಲಿ ಚುನಾವಣಾ ಕಾರ್ಯಾಲಯ ಉದ್ಘಾಟಿಸಿ ಮಾತನಾಡುತ್ತ, ಹಿಂದೆ ಎನ್‌ಡಿಎ ಸರ್ಕಾರವಿದ್ದಾಗ ವಾಜಪೇಯಿ ನೇತೃತ್ವದಲ್ಲಿ ದೇಶ ಪ್ರಗತಿಯನ್ನು ಸಾಧಿಸಿತು. ಯುಪಿಎ ಸರ್ಕಾರ ಕೇವಲ ಆಶ್ವಾಸನೆ ಮಾತ್ರ ನೀಡಿದೆ. ಡಾ.ಮನಮೋಹನ್ ಸಿಂಗ್ ಅವರ ಆಡಳಿತ ಕರಾಳ ಆಡಳಿತ ಎಂದು ಟೀಕಿಸಿದರು.

ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳಿಗೆ ಅವರ ಕುಟಿಲ ನೀತಿ ಗೊತ್ತಾಗಿದೆ. ಆದ್ದರಿಂದ ಮಿತ್ರ ಪಕ್ಷಗಳು ಕಾಂಗ್ರೆಸ್ ತೊರೆಯುತ್ತಿವೆ. ಅಭಿವೃದ್ಧಿಯೊಂದೇ ಮೂಲಮಂತ್ರವಾಗಿರುವ ಬಿಜೆಪಿ ಎಲ್.ಕೆ.ಆಡ್ವಾಣಿ ಅವರನ್ನು ಪ್ರಧಾನಿಯಾಗಿಸಲು ಕಂಕಣಬದ್ದವಾಗಿದೆ ಎಂದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಕಾಂಗ್ರೆಸ್ ಪಟ್ಟಿ ನಾಳೆ ಬಿಡುಗಡೆ: ಆಸ್ಕರ್
ಮಾನನಷ್ಟ ಮೊಕದ್ದಮೆ ವಜಾಗೊಳಿಸುವಂತೆ ಎಚ್‌ಡಿಕೆ ಕೋರ್ಟ್‌ಗೆ ಅರ್ಜಿ
ಲೋಕಸಭೆ: ಜೆಡಿಎಸ್ ಪ್ರಥಮಪಟ್ಟಿ ಬಿಡುಗಡೆ
ಚಂದ್ರೇಗೌಡ ಭಿನ್ನಮತದ ಹಿಂದೆ ಹಿಡನ್ ಅಜೆಂಡಾ: ಡಿಕೆಶಿ
ಭಾರತ್ ನಿರ್ಮಾಣ್ ಹೆಸರು ಬಳಕೆ ವಿರುದ್ಧ ಬಿಜೆಪಿ ಕಿಡಿ
ಅನಂತಮೂರ್ತಿ ವಿರುದ್ಧ ಜಾಮೀನು ರಹಿತ ವಾರಂಟ್