ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಸರ್ಕಾರದಿಂದ ಹೌಸಿಂಗ್ ಬೋರ್ಡ್ ಹಗರಣ: ಕುಮಾರಸ್ವಾಮಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸರ್ಕಾರದಿಂದ ಹೌಸಿಂಗ್ ಬೋರ್ಡ್ ಹಗರಣ: ಕುಮಾರಸ್ವಾಮಿ
ಕರ್ನಾಟಕ ಹೌಸಿಂಗ್ ಬೋರ್ಡ್‌ನಿಂದ ಶಿಡ್ಲಘಟ್ಟದ ಸರಗೂರು, ಚಿಕ್ಕಬಳ್ಳಾಪುರ, ಹೊರ ವಲಯಗಳಲ್ಲಿ ನಿವೇಶನ, ವಸತಿ ನಿರ್ಮಿಸುವುದಾಗಿ ಹೇಳಿ ಸರ್ಕಾರ ರೈತರ ಭೂಮಿಯನ್ನು ಕಬಳಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಈ ಭೂಮಿಯನ್ನು ಹೌಸಿಂಗ್ ಬೋರ್ಡ್ ಹೆಸರಿನಲ್ಲಿ ಸಚಿವ ಕೃಷ್ಣಯ್ಯ ಶೆಟ್ಟಿ ಅವರ ಸಹೋದರನ ಹೆಸರಲ್ಲಿ ಜಿಪಿಎ ಮಾಡಿಕೊಳ್ಳಲಾಗಿದೆ ಎಂದು ಸುದ್ದಿಗಾರರೊಂದಿಗೆ ಮಾತನಾಡುತ್ತ ಹೇಳಿದರು.

ಹೌಸಿಂಗ್ ಬೋರ್ಡ್ ಹೆಸರಲ್ಲಿ ರೈತರ ಭೂಮಿಯನ್ನು ಕಡಿಮೆ ಬೆಲೆಗೆ ಪಡೆದು ಹಣ ಲೂಟಿ ಮಾಡಲಾಗುತ್ತದೆ. ಇದು ಇದೇ ರೀತಿ ಮುಂದುವರಿದರೆ ಹೌಸಿಂಗ್ ಬೋರ್ಡ್ ಬಾಗಿಲು ಹಾಕಿಕೊಳ್ಳಬೇಕಾಗುತ್ತದೆ ಎಂದು ದೂರಿದರು.

ಜನತೆಗೆ ನಿವೇಶನ, ವಸತಿ ನೀಡದೇ ಭೂಮಿ ಕಬಳಿಸುತ್ತಿರುವ ಸಚಿವ ಕೃಷ್ಣಯ್ಯ ಶೆಟ್ಟಿ ಈ ಹಗರಣದಿಂದ ಜೈಲಿಗೆ ಹೋಗುವ ಪರಿಸ್ಥಿತಿ ಬರುತ್ತದೆ ಎಂದು ಅವರು ದೂರಿದರು. ಈ ಬಗ್ಗೆ ಸಹ ಜೆಡಿಎಸ್ ಚುನಾವಣಾ ಆಯೋಗಕ್ಕೆ ದೂರು ನೀಡಲಿದೆ ಎಂದು ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಪಟ್ಟಿಯಲ್ಲಿ ಹೆಸರಿಲ್ಲ, ಮತದಾರರ ಅಳಲು...
ಯತ್ನಾಳ್ ಶೀಘ್ರವೇ ಜೆಡಿಎಸ್ ತೆಕ್ಕೆಗೆ?
ನೀತಿ ಸಂಹಿತೆ ಉಲ್ಲಂಘನೆಯಲ್ಲಿ ಬಿಜೆಪಿ ನಂ-1
ಪೂಣೆ ಹತ್ಯೆ: ಹತ್ತು ಆರೋಪಿಗಳು ಸಿಸಿಬಿ ಪೊಲೀಸರ ಬಲೆಗೆ
ಮತದಾರರಿಗೆ ಸಿಮ್‌ಕಾರ್ಡ್ ವಿತರಿಸಿಲ್ಲ: ಅನಂತ್ ಕುಮಾರ್
ಪಾಲಿಕೆ ಮೇಲೆ ರಾಷ್ಟ್ರಧ್ವಜ ಮಾತ್ರ ಹಾರಾಡಬೇಕು: ಹೈಕೋರ್ಟ್