ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಎಚ್‌ಡಿಕೆ ಯಾರನ್ನು ಕೇಳಿ ಬಳ್ಳಾರಿಗೆ ಹೋಗಿದ್ರು: ಸಿಎಂ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಎಚ್‌ಡಿಕೆ ಯಾರನ್ನು ಕೇಳಿ ಬಳ್ಳಾರಿಗೆ ಹೋಗಿದ್ರು: ಸಿಎಂ
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಯಾರನ್ನು ಕೇಳಿ ಬಳ್ಳಾರಿಗೆ ಹೋಗಿದ್ದು, ಮುಖ್ಯಮಂತ್ರಿ ಆಗಿ ಅವರ ಬಂಧನಕ್ಕೆ ಕೂಡಲೇ ಆದೇಶ ನೀಡಬಹುದಿತ್ತು. ಅವರ ಪಾಪಕ್ಕೆ ಅವರೇ ಹೋಗಲಿ ಎಂದು ಹಾಗೆ ಮಾಡದೆ ಸುಮ್ಮನಾದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಇಲ್ಲಿನ ಹರಿಹರದ ಗಾಂಧಿ ಮೈದಾನದಲ್ಲಿ ಶುಕ್ರವಾರ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗಣಿ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ಇದ್ದಾಗ ಕುಮಾರಸ್ವಾಮಿ ಅಲ್ಲಿಗೆ ಹೋಗಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಅಪ್ಪ-ಮಕ್ಕಳು ಬಳ್ಳಾರಿಯಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಅನಗತ್ಯವಾಗಿ ಗೊಂದಲ ಉಂಟುಮಾಡಿ ಚುನಾವಣೆಯನ್ನು ಮುಂದೂಡುವ ಸಂಚು ರೂಪಿಸುತ್ತಿದ್ದಾರೆ ಎಂದು ಆರೋಪಿಸಿದರು. ಇದು ಮಾಜಿ ಮುಖ್ಯಮಂತ್ರಿಯೊಬ್ಬರು ನಡೆದುಕೊಳ್ಳುವ ರೀತಿಯೇ?ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಭಾರತ್ ನಿರ್ಮಾಣ ರಾಲಿ ಕುರಿತು ಆಕ್ರೋಶ ವ್ಯಕ್ತಪಡಿಸಿದ ಅವರು, ಐವತ್ತು ವರ್ಷ ಆಡಳಿತ ನಡೆಸಿದ ಕಾಂಗ್ರೆಸ್‌ಗೆ ಭಾರತ ನಿರ್ಮಾಣ ಮಾಡಲು ಪುರುಸೊತ್ತು ಸಿಗಲಿಲ್ವಾ ಎಂದು ವ್ಯಂಗ್ಯವಾಡಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಶಾಸಕ ವಿ.ಸೋಮಣ್ಣ ಕಾಂಗ್ರೆಸ್‌ಗೆ ಗುಡ್‌‌ಬೈ
ಕಾಂಗ್ರೆಸ್‌ನ್ನು ಹೊಗಳಿ ಅಟ್ಟಕ್ಕೇರಿಸಿದ ಅನಂತಮೂರ್ತಿ !
ಟಿವಿ 9ಗೆ ಪ್ರತಿಷ್ಠಿತ ಗೋಯಂಕಾ ಪ್ರಶಸ್ತಿ
ಮೈಸೂರು ಗಲಭೆ: ಪರಿಸ್ಥಿತಿ ಶಾಂತ-ನಿಷೇಧಾಜ್ಞೆ ಮುಂದುವರಿಕೆ
ಬಿಜೆಪಿ ಕಾಂಗ್ರೆಸ್‌‌ನವರ ಅಪ್ಪನ ಆಸ್ತಿಯಾ?: ಅಶೋಕ್
ಹೆಗಡೆ ಸ್ಪರ್ಧೆಗೆ ಅವಕಾಶ ನೀಡಬಾರದು: ಯು.ಆರ್.ಅನಂತಮೂರ್ತಿ