ಬಿಜೆಪಿ ಕಾರ್ಯಕರ್ತ ಚಂದ್ರಶೇಖರ್ ಬಾಬು ಎಂಬುವವರ ಕೊಲೆ ಪ್ರಕರಣದ ಶಂಕಿತ ಆರೋಪಿ ಎನ್ನಲಾದ ರೌಡಿ ಪರಂಧಾಮ ಸೋಮವಾರ ಬೆಳಿಗ್ಗೆ ಪೊಲೀಸ್ ಶೂಟೌಟ್ಗೆ ಬಲಿಯಾಗಿರುವ ಘಟನೆ ನಡೆದಿದೆ.
ಶನಿವಾರ ಬೆಳಿಗ್ಗೆ ನಗರದ ಲಾಲ್ಬಾಗ್ ಸಮೀಪ ನಡೆದ ಬಿಜೆಪಿ ಕಾರ್ಯಕರ್ತ ಚಂದ್ರಶೇಖರ್ ಬಾಬು ಎಂಬುವರ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ರೌಡಿ ಪರಂಧಾಮ ಇಂದು ಬೆಳಿಗ್ಗೆ ಪರಪ್ಪನ ಅಗ್ರಹಾರ ಪ್ರದೇಶದಲ್ಲಿ ಪೊಲೀಸರ ಗುಂಡೇಟಿಗೆ ಬಲಿಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿ ಪರಂಧಾಮನ ಚಲನವಲವನ್ನು ಗಮನಿಸುತ್ತಿದ್ದ ಅಪರಾಧ ವಿಭಾದದ ಪೊಲೀಸರ ತಂಡ ಆತ ಕೋರಮಂಗಲ ಪ್ರದೇಶದಲ್ಲಿರುವುದನ್ನು ಖಚತಪಡಿಸಿಕೊಂಡು ಸೆರೆ ಹಿಡಿಯಲು ಮುಂದಾದ ಸಂದರ್ಭದಲ್ಲಿ, ಆತ ಪರಾರಿಯಾಗಲು ಯತ್ನಿಸಿದ್ದ. ಅಲ್ಲದೇ ಪೊಲೀಸರತ್ತ ಗುಂಡು ಹಾರಿಸಿದಾಗ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಗಾಯಗೊಂಡಿದ್ದರು. ಆತ್ಮರಕ್ಷಣೆಗಾಗಿ ಪೊಲೀಸರು ಪ್ರತಿಯಾಗಿ ಗುಂಡಿನ ದಾಳಿ ನಡೆಸಿದಾಗ ಪರಂಧಾಮ ಸಾವನ್ನಪ್ಪಿರುವುದಾಗಿ ಹೇಳಿದ್ದಾರೆ.
ತಮಿಳುನಾಡು ಮೂಲದ ಪರಂಧಾಮ(30ವ), ಮೂರು ಕೊಲೆ ಮತ್ತು ಹಲವಾರು ಒತ್ತಾಯದ ಹಣ ವಸೂಲಿ ಪ್ರಕರಣಗಳಲ್ಲಿ ಬೇಕಾಗಿದ್ದ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. |