ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಬಿಜೆಪಿ-ಕಾಂಗ್ರೆಸ್‌ನಿಂದ ರಾಜ್ಯದ ಹಿತ ಸಾಧ್ಯವಿಲ್ಲ: ಎಚ್‌ಡಿಕೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಬಿಜೆಪಿ-ಕಾಂಗ್ರೆಸ್‌ನಿಂದ ರಾಜ್ಯದ ಹಿತ ಸಾಧ್ಯವಿಲ್ಲ: ಎಚ್‌ಡಿಕೆ
ರಾಜ್ಯದ ಹಿತ ಕಾಪಾಡುವ ತಾಕತ್ತು ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಕ್ಷಕ್ಕೆ ಇಲ್ಲ. ಜೆಡಿಎಸ್‌ನ ಎಲ್ಲಾ ಅಭ್ಯರ್ಥಿಗಳಿಗೆ ಮತದಾರರು ಆಶೀರ್ವಾದ ಮಾಡಿದರೆ ನಾವು ರಾಜ್ಯದ ಹಿತ ಕಾಪಾಡಿ ನಮ್ಮ ಶಕ್ತಿಯನ್ನು ತೋರಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಪಾಂಡವಪುರ ತಾಲೂಕಿನ ಮೇಲುಕೋಟೆ ಆದಿಚುಂಚನಗಿರಿ ಸಮುದಾಯ ಭವನದ ಆವರಣದಲ್ಲಿ ಲೋಕಸಭೆ ಚುನಾವಣೆಯ ಪ್ರಚಾರ ಭಾಷಣ ಮಾಡಿದ ಅವರು, ಕಾವೇರಿ ನೀರನ್ನು ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಲು ರಾಜ್ಯಕ್ಕೆ ಅವಕಾಶವೇ ಇಲ್ಲದಂತಹ ಪರಿಸ್ಥಿತಿಯನ್ನು ರಾಷ್ಟ್ರೀಯ ಪಕ್ಷಗಳು ಸೃಷ್ಟಿಸಿವೆ. ರೈಲ್ವೆ ಯೋಜನೆಗಳು ನೆನೆಗುದಿಗೆ ಬಿದ್ದಿವೆ. ಕೇಂದ್ರ ಸರ್ಕಾರದ ಬಗ್ಗೆ ನೈತಿಕ ಹೋರಾಟ ಮಾಡಲು ಆ ಪಕ್ಷಗಳು ಮತ್ತು ನಾಯಕರು ವಿಫಲವಾಗಿವೆ ಎಂದರು.

ಈ ಬಾರಿಯ ಚುನಾವಣೆ ಜೆಡಿಎಸ್‌ಗೆ ಸತ್ವ ಪರೀಕ್ಷೆಯಾಗಲಿದೆ. ಅದಕ್ಕೆ ಕ್ಷೇತ್ರದ ಜನತೆ ಆಶೀರ್ವಾದದ ಮೂಲಕ ಅಭ್ಯರ್ಥಿ ಚಲುವರಾಯ ಸ್ವಾಮಿಯವರನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು. ಮಂಡ್ಯ ದೇವೇಗೌಡರ ತವರು ಜಿಲ್ಲೆ. ಕಷ್ಟ ಕಾಲದಿಂದ ಜೆಡಿಎಸ್ ಪಕ್ಷವನ್ನು ಬೆಳೆಸಿಕೊಂಡು ಬಂದಿದೆ. ಇನ್ನು ಮುಂದೆಯೂ ಪಕ್ಷ ಸದೃಢವಾಗಿ ಬೆಳೆಯಲು ಜನರ ಆಶೀರ್ವಾದ ಅಗತ್ಯ ಎಂದು ತಿಳಿಸಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಕಾಂಗ್ರೆಸ್ ಕೆಲವರ ಸ್ವತ್ತಾಗಿದೆ: ಡಿ.ಬಿ.ಚಂದ್ರೇಗೌಡ
ಕೊನೆಗೂ ಮಂಡ್ಯದ ಅಖಾಡಕ್ಕೆ ಧುಮುಕಿದ ಅಂಬರೀಶ್
ಸಾಂಗ್ಲಿಯಾನ ವಿರುದ್ಧ ಲಿಂಬಾವಳಿ ಆಕ್ರೋಶ
ಜೈಲಿಗೆ ಹೋಗಲು ತಯಾರು: ರೇಣುಕಾಚಾರ್ಯ
ಮತದಾರರು ಯಡಿಯೂರಪ್ಪ ಕಿಸೆಯಲ್ಲಿದ್ದಾರಾ?: ಬಂಗಾರಪ್ಪ
ರೈತರಿಗೆ ವೇತನ-ಬಜರಂಗ ದಳ ನಿಷೇಧ: ಜೆಡಿಎಸ್ ಪ್ರಣಾಳಿಕೆ