ತಮ್ಮ ಬಂಧನದ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವ ಶೋಭಾ ಕರಂದ್ಲಾಜೆ ಅವರ ಕೈವಾಡವಿದೆ ಎಂದು ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.
ಗಲಭೆ ಪೀಡಿತ ಕ್ಯಾತಮಾರನಹಳ್ಳಿ ಪ್ರದೇಶಕ್ಕೆ ನಿಷೇಧದ ನಡುವೆಯೂ ಪ್ರವೇಶಿಸಲು ಯತ್ನಿಸಿದ ವೇಳೆ ಬಂಧನಕ್ಕೊಳಗಾದ ಪ್ರಮೋದ್ ಮುತಾಲಿಕ್, ಬಿಜೆಪಿ ಹಾಗೂ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಹಿಂದುತ್ವದ ಹೆಸರು ಹೇಳಿಕೊಂಡೇ ಅಧಿಕಾರಕ್ಕೆ ಬಂದ ಬಿಜೆಪಿ ಈಗ ಹಿಂದು ವಿರೋಧಿಯಂತೆ ವರ್ತಿಸುತ್ತಿದೆ. ಅವರ ಈ ಧೋರಣೆ ಸಹಿಸಲು ಸಾಧ್ಯವಿಲ್ಲ, ಬಿಜೆಪಿ ವಿರುದ್ಧದ ತಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಗುಡುಗಿದ್ದಾರೆ.
13ರವರೆಗೆ ನ್ಯಾಯಾಂಗ ಬಂಧನ: ಕ್ಯಾತಮಾರನಹಳ್ಳಿಗೆ ಭೇಟಿ ನೀಡಲು ಯತ್ನಿಸಿ ಬಂಧನಕ್ಕೊಳಗಾದ ಪ್ರಮೋದ್ ಮುತಾಲಿಕ್ ಹಾಗೂ ಅವರ 11ಮಂದಿ ಸಹಚರರನ್ನು ಏಪ್ರಿಲ್ 13ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. |