ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಎನ್‌ಡಿಎ ಅಧಿಕಾರದ ಗದ್ದುಗೆ ಏರಿದ್ರೆ ಗೋಹತ್ಯೆ ನಿಷೇಧ: ಅನಂತಕುಮಾರ್
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಎನ್‌ಡಿಎ ಅಧಿಕಾರದ ಗದ್ದುಗೆ ಏರಿದ್ರೆ ಗೋಹತ್ಯೆ ನಿಷೇಧ: ಅನಂತಕುಮಾರ್
ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರದ ಗದ್ದುಗೆ ಏರಿದರೆ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಲಾಗುವುದು ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಅನಂತಕುಮಾರ್ ಭರವಸೆ ನೀಡಿದ್ದಾರೆ.

ಮಂಗಳವಾರ ನಡೆದ ಭಗವಾನ್ ಮಹಾವೀರರ 2008ನೇ ಜನ್ಮ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶದ ಸಂವಿಧಾನವು ಗೋಹತ್ಯೆ ನಿಷೇಧ ಮಾಡುವ ಅವಕಾಶ ಕಲ್ಪಿಸಿದೆ. ಆದರೆ, ಇದುವರೆಗೂ ಕಾಯ್ದೆಯನ್ನು ಜಾರಿಗೊಳಿಸಿಲ್ಲ. ನೀವು ಆಶೀರ್ವಾದ ಮಾಡಿದರೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಲಾಗುವುದು ಎಂದರು.

ಅಲ್ಲದೆ, ಬೆಂಗಳೂರು-ಜೋಧಪುರ ನಡುವಿನ ರೈಲು ಮಾರ್ಗವನ್ನು ಇತ್ತೀಚೆಗೆ ಅನಗತ್ಯವಾಗಿ ಕೊಯಮತ್ತೂರಿಗೆ ವಿಸ್ತರಿಸಲಾಗಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಈ ರೈಲು ಮಾರ್ಗವನ್ನು ಮತ್ತೆ ಬೆಂಗಳೂರಿನಿಂದ ಆರಂಭಿಸಲಾಗುವುದು ಹಾಗೂ ಈ ರೈಲಿನ ಹೆಸರನ್ನು ವರ್ಧಮಾನ ಎಕ್ಸ್‌ಪ್ರೆಸ್ ಎಂದು ಬದಲಾಯಿಸಲಾಗುವುದು ಎಂದು ಹೇಳಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಹಿಂದುತ್ವ ಖಂಡಿಸ್ತೇನೆ-ನನ್ನ ತಲೆ ಕತ್ತರಿಸ್ತೀರಾ?: ಸಿದ್ದರಾಮಯ್ಯ ಸವಾಲು
ಬಂಧನದ ಹಿಂದೆ ಕರಂದ್ಲಾಜೆ ಕೈವಾಡ: ಮುತಾಲಿಕ್
ಸಚಿವೆ ಶೋಭಾ ಕರಂದ್ಲಾಜೆಗೆ ಗ್ರಾಮಸ್ಥರಿಂದ ಘೇರಾವ್
ಬೆಂಗಳೂರು: ಐವರು ದರೋಡೆಕೋರರ ಸೆರೆ
ಸುಳ್ಳು ಸುದ್ದಿ ಹಬ್ಬಿಸುವುದರಲ್ಲಿ ಬಿಜೆಪಿ ನಂ-1: ಪೂಜಾರಿ
ತಾಯಿಯ ವಿರೋಧದಿಂದ ಸ್ಪರ್ಧೆ ಕೈ ಬಿಟ್ಟೆ: ಖೇಣಿ