ಕೇಂದ್ರದಲ್ಲಿ ಎನ್ಡಿಎ ಸರ್ಕಾರ ಅಧಿಕಾರದ ಗದ್ದುಗೆ ಏರಿದರೆ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಲಾಗುವುದು ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಅನಂತಕುಮಾರ್ ಭರವಸೆ ನೀಡಿದ್ದಾರೆ.
ಮಂಗಳವಾರ ನಡೆದ ಭಗವಾನ್ ಮಹಾವೀರರ 2008ನೇ ಜನ್ಮ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶದ ಸಂವಿಧಾನವು ಗೋಹತ್ಯೆ ನಿಷೇಧ ಮಾಡುವ ಅವಕಾಶ ಕಲ್ಪಿಸಿದೆ. ಆದರೆ, ಇದುವರೆಗೂ ಕಾಯ್ದೆಯನ್ನು ಜಾರಿಗೊಳಿಸಿಲ್ಲ. ನೀವು ಆಶೀರ್ವಾದ ಮಾಡಿದರೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಲಾಗುವುದು ಎಂದರು.
ಅಲ್ಲದೆ, ಬೆಂಗಳೂರು-ಜೋಧಪುರ ನಡುವಿನ ರೈಲು ಮಾರ್ಗವನ್ನು ಇತ್ತೀಚೆಗೆ ಅನಗತ್ಯವಾಗಿ ಕೊಯಮತ್ತೂರಿಗೆ ವಿಸ್ತರಿಸಲಾಗಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಈ ರೈಲು ಮಾರ್ಗವನ್ನು ಮತ್ತೆ ಬೆಂಗಳೂರಿನಿಂದ ಆರಂಭಿಸಲಾಗುವುದು ಹಾಗೂ ಈ ರೈಲಿನ ಹೆಸರನ್ನು ವರ್ಧಮಾನ ಎಕ್ಸ್ಪ್ರೆಸ್ ಎಂದು ಬದಲಾಯಿಸಲಾಗುವುದು ಎಂದು ಹೇಳಿದರು. |