ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಕಾಂಗ್ರೆಸ್-ಜೆಡಿಎಸ್ ಧೂಳೀಪಟವಾಗಲಿದೆ: ಯಡಿಯೂರಪ್ಪ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕಾಂಗ್ರೆಸ್-ಜೆಡಿಎಸ್ ಧೂಳೀಪಟವಾಗಲಿದೆ: ಯಡಿಯೂರಪ್ಪ
ರಾಜ್ಯದಲ್ಲಿ ಆಪರೇಷನ್ ಕಮಲ ಮುಂದುವರಿಯಲಿದ್ದು, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಧೂಳೀಪಟವಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಪಕ್ಷದ ಚುನಾವಣಾ ಕಚೇರಿಯಲ್ಲಿ ಬುಧವಾರ ಗೋವಿಂದರಾಜ ನಗರದ ಮಾಜಿ ಶಾಸಕ ವಿ.ಸೋಮಣ್ಣ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಅವರು ಮಾತನಾಡಿದರು. ರಾಜಕೀಯ ಧ್ರುವೀಕರಣ ನಡೆಯುತ್ತಿದ್ದು, ಇದು ಆಪರೇಷನ್ ಕಮಲ ಅಲ್ಲ ಎಂದು ಸ್ಪಷ್ಟಪಡಿಸಿದರು.

ಕಳೆದ ಹತ್ತು ತಿಂಗಳಲ್ಲಿ ತಮ್ಮ ಸರ್ಕಾರ ಪರಿಶಿಷ್ಟ ಜಾತಿ, ಅಲ್ಪಸಂಖ್ಯಾತ, ಹಿಂದುಳಿದ ವರ್ಗ ಸೇರಿದಂತೆ ಎಲ್ಲ ವರ್ಗದ ಜನರಿಗೂ ನ್ಯಾಯ ಸಲ್ಲಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಅನುಷ್ಠಾನಕ್ಕೆ ತಂದಿದೆ. ಜನತೆ ಬಿಜೆಪಿ ಪರ ನಿಂತಿದ್ದಾರೆ. ಕಳೆದ ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಲೋಕಸಭಾ ಚುನಾವಣೆಯಲ್ಲೂ ಮುಂದುವರಿಯಲಿದೆ ಎಂದು ಭವಿಷ್ಯ ನುಡಿದರು.

ಟೀಕೆ-ಟಿಪ್ಪಣಿಗಳಿಂದ ನಮಗೆ ನಾಯಕತ್ವ ಸಿಗಲಿದೆ ಎನ್ನುವುದು ಕಾಂಗ್ರೆಸ್, ಜೆಡಿಎಸ್ ಭ್ರಮೆ ಅದು ಯಾವುದೂ ನಡೆಯುವುದಿಲ್ಲ. ಹಿಂದೂ, ಮುಸ್ಲಿಂ, ಅಲ್ಪಸಂಖ್ಯಾತರು, ಕ್ರೈಸ್ತರು ಮುಂದುವರಿದ ವರ್ಗ ಬಿಜೆಪಿ ಜತೆ ಇರುವುದರಿಂದ ಈ ಬಾರಿ ಬಿಜೆಪಿ 24ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಬಹಿರಂಗ ಚರ್ಚೆಗೆ ಸಿದ್ಧ: ಎಚ್.ಡಿ. ಕುಮಾರಸ್ವಾಮಿ
ಸಿಎಂಗೆ ಕವಡೆ ಕೊಟ್ಟು ಮೆಜೆಸ್ಟಿಕ್‌‌ನಲ್ಲಿ ಕೂರಿಸಬೇಕು: ಬಂಗಾರಪ್ಪ
ಕಾಂಗ್ರೆಸ್‌‌ನ ವಿ.ಸೋಮಣ್ಣ ಬಿಜೆಪಿ ಸೇರ್ಪಡೆ
ಕತ್ತೆ, ಒಂಟೆಗಳಿಗೆ ಪೂಜೆ ಸಲ್ಲಿಸಿದ ವಾಟಾಳ್!
ಬಿಜೆಪಿಯಿಂದ ಬೆದರಿಕೆಯ ರಾಜಕಾರಣ: ಹೊರಟ್ಟಿ
ಅಧಿಕಾರ ಬಿಟ್ಟಿರಲು ಕಾಂಗ್ರೆಸ್‌ಗೆ ಸಾಧ್ಯವಿಲ್ಲ: ಆಡ್ವಾಣಿ