ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಡಿವಿಎಸ್, ಅಂಬಿ, ರಾಘವೇಂದ್ರ ನಾಮಪತ್ರ ಸಲ್ಲಿಕೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಡಿವಿಎಸ್, ಅಂಬಿ, ರಾಘವೇಂದ್ರ ನಾಮಪತ್ರ ಸಲ್ಲಿಕೆ
NRB
ಬಿಜೆಪಿ ರಾಜ್ಯಾಧ್ಯಕ್ಷ ಡಿ.ವಿ.ಸದಾನಂದಗೌಡ, ಚಿತ್ರನಟ ಅಂಬರೀಶ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ರಾಘವೇಂದ್ರ, ಮಂಡ್ಯದಿಂದ ಚಲುವರಾಯಸ್ವಾಮಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಘಟಾನುಘಟಿಗಳು ಏಪ್ರಿಲ್ 30ರಂದು ನಡೆಯಲಿರುವ 11ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ಗುರುವಾರ ನಾಮಪತ್ರ ಸಲ್ಲಿಸಿದರು.

ಎರಡನೇ ಹಂತದಲ್ಲಿ ನಡೆಯಲಿರುವ 11ಕ್ಷೇತ್ರಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕೊನೇ ದಿನವಾದ ಇಂದು, ವಿವಿಧ ರಾಜಕೀಯ ಪಕ್ಷಗಳ ಘೋಷಿತ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಗಳನ್ನು ಆಯಾ ಚುನಾವಣಾಧಿಕಾರಿಗಳಿಗೆ ಸಲ್ಲಿಸಿದರು.

NRB
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ರಾಘವೇಂದ್ರ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಂಬರೀಶ್ ತಮ್ಮ ಬೆಂಬಲಿಗರೊಂದಿಗೆ ಜತೆಗೂಡಿ ನಾಮಪತ್ರ ಸಲ್ಲಿಸಿದರು.ಬಿಜೆಪಿ ರಾಜ್ಯಾಧ್ಯಕ್ಷ ಡಿ.ವಿ.ಸದಾನಂದ ಗೌಡ ಅವರು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ದಾಖಲಿಸಿದರು.

ಮಾಜಿ ಸಚಿವ ಜೀವಿಜಯ ಅವರು ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಅದೇ ರೀತಿ ಇತ್ತೀಗಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಎಲ್.ಆರ್.ಶಿವರಾಮೇಗೌಡ ಅವರು ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದರು.

PTI
ಮಂಗಳೂರು ಲೋಕಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿರುವ ನಳಿನಕುಮಾರ್ ಕಟೀಲ್ ಅವರೂ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸಿಂಧೂರ ತಮ್ಮ ಉಮೇದುವಾರಿಕೆ ಸಲ್ಲಿಸಿದರು.

ಏ.11ರಂದು ಪರಿಶೀಲನೆ: ಎರಡನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದು ಮುಕ್ತಾಯಗೊಂಡಿರುವುದರಿಂದ ಚುನಾವಣೆಯ ಒಂದು ಹಂತ ಮುಗಿದಂತಾಗಿದೆ. ನಾಮಪತ್ರಗಳ ಪರಿಶೀಲನೆ ಏಪ್ರಿಲ್ 11ರಂದು ನಡೆಯಲಿದೆ. ನಾಮಪತ್ರ ಹಿಂತೆಗೆದುಕೊಳ್ಳಲು ಏಪ್ರಿಲ್ 13ರಂದು ಅಂತಿಮ ದಿನ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಕೈ ಕತ್ತರಿಸಿ ಹೇಳಿಕೆ: ಕಾಗೋಡು ಜಾಮೀನು ಅರ್ಜಿ ತಿರಸ್ಕೃತ
20 ಸೀಟು ಕೊಡಿ ನನ್ನ ತಾಕತ್ತು ತೋರಿಸ್ತೇನೆ: ದೇವೇಗೌಡ
ವಾಜಪೇಯಿ ಇದ್ದಾಗ ರಾಮಮಂದಿರ ಯಾಕೆ ಕಟ್ಟಿಸಿಲ್ಲ: ಸಿದ್ದು
ರಾಜ್ಯದಲ್ಲಿ ಬಿಜೆಪಿಗೆ 22ಸ್ಥಾನ: ಶೋಭಾ ಕರಂದ್ಲಾಜೆ
ಮಾಜಿ ಪ್ರಧಾನಿ ದೇವೇಗೌಡರು ಸಾಲಗಾರರು!
ಕಾಂಗ್ರೆಸ್‌ನಿಂದ ದೇಶ ಸತ್ಯನಾಶ: ಮೋದಿ ಕಿಡಿನುಡಿ