ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಮತ್ತೆ ಮುನಿಸಿಕೊಂಡಿದ್ದಾರೆ. ಸ್ಥಾನಮಾನ ನೀಡುವ ವಿಚಾರದಲ್ಲಿ ಹೈಕಮಾಂಡ್ ವಿಳಂಬ ಧೋರಣೆ ಅನುಸರಿಸುತ್ತಿರುವುದೇ ಸಿದ್ದರಾಮಯ್ಯ ಅವರ ಮುನಿಸಿಗೆ ಕಾರಣ.
ವಿಧಾನಸಭೆ ಪ್ರತಿಪಕ್ಷ ನಾಯಕನ ಹುದ್ದೆಗೆ ತಮ್ಮ ಹೆಸರು ಘೋಷಿಸದಿದ್ದರೆ ಪ್ರಚಾರದಿಂದ ದೂರ ಉಳಿಯುವುದಾಗಿ ಸಿದ್ದರಾಮಯ್ಯ ಅವರ ಬೆಂಬಲಿಗರು ಬೆದರಿಕೆ ಹಾಕಿರುವುದರಿಂದ ಕಾಂಗ್ರೆಸ್ ಪಾಳಯ ಮತ್ತೆ ಸಂಕಷ್ಟಕ್ಕೆ ಸಿಲುಕಿದೆ.
ಸಿದ್ದರಾಮಯ್ಯರವರು ಬೆಂಬಲಿಗರೊಂದಿಗೆ ಸಭೆ ನಡೆಸಿ ಸ್ಥಾನಮಾನ ಕುರಿತು ಚರ್ಚಿಸಿದ್ದಾರೆ. ವಿಧಾನಸಭೆ ಪ್ರತಿಪಕ್ಷ ನಾಯಕನ ಹುದ್ದೆ ನೀಡುವಲ್ಲಿ ಮೀನಮೇಷ ಎಣಿಸುತ್ತಿರುವ ಹೈಕಮಾಂಡ್ ಬಗ್ಗೆ ಈ ಸಂದರ್ಭದಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು ಎನ್ನಲಾಗಿದೆ.
ಪ್ರತಿಪಕ್ಷ ಸ್ಥಾನದ ನಾಯಕನ ಘೋಷಣೆ ಹೊರ ಬೀಳದಿದ್ದರೆ ಪ್ರಚಾರದಿಂದ ದೂರ ಉಳಿಯಬೇಕೆಂಬುದು ಸಿದ್ದರಾಮಯ್ಯ ಬೆಂಬಲಿಗರು ಒತ್ತಾಯಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ವರಿಷ್ಠರ ನಿಲುವಿನಿಂದ ನನಗೂ ಅಸಮಾಧಾನವಾಗಿದ್ದು, ಪ್ರಚಾರ ಬಿಟ್ಟು ಆಸ್ಟ್ತ್ರೇಲಿಯಾ ಪ್ರವಾಸಕ್ಕೆ ಹೋಗುತ್ತೇನೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.
|