ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಸೂಕ್ತ ಸಮಯದಲ್ಲಿ ಬಿಜೆಪಿಗೆ ಸೂಕ್ತ ಉತ್ತರ: ಡಿಕೆಶಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸೂಕ್ತ ಸಮಯದಲ್ಲಿ ಬಿಜೆಪಿಗೆ ಸೂಕ್ತ ಉತ್ತರ: ಡಿಕೆಶಿ
ಚುನಾವಣೆ ನಂತರ ಕಾಂಗ್ರೆಸ್ ಮೂರನೇ ಸ್ಥಾನಕ್ಕೆ ಹೋಗಲಿದೆ ಎಂಬ ಯಡಿಯೂರಪ್ಪ ಅವರ ಹೇಳಿಕೆಯಿಂದ ಎಲ್ಲಾ ಕಾಂಗ್ರೆಸ್ಸಿಗರ ಎದೆ ಕುದಿಯುತ್ತಿದೆ. ಎಲ್ಲರೂ ಸೂಕ್ತ ಕಾಲದಲ್ಲಿ ಸರಿಯಾದ ಉತ್ತರ ನೀಡಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಬಿಜೆಪಿಯವರು ಕಾಂಗ್ರೆಸ್ ನಾಯಕರುಗಳನ್ನು ಕರೆದುಕೊಂಡು ಹೋಗಿರಬಹುದು. ಆದರೆ ನಾಯಕರುಗಳಲ್ಲಿನ ಕಾಂಗ್ರೆಸ್ಸನ್ನು ತೆಗೆದುಕೊಂಡು ಹೋಗಲು ಸಾಧ್ಯವಿಲ್ಲ. ಈಗ ಕಾಂಗ್ರೆಸ್ ಬಿಜೆಪಿ ಆಗಿರಬಹುದು. ಆದರೆ ಶೀಘ್ರದಲ್ಲೇ ಅದು ಬಿಜೆಪಿ ಕಾಂಗ್ರೆಸ್ ಆಗಲಿದೆ ಎಂದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದಾನಂದ ಗೌಡರು ಕಾಂಗ್ರೆಸ್ಸಿನ ಹಿರಿಯ ನಾಯಕರನ್ನೆಲ್ಲ ಗುಜುರಿಗೆ ಹೋಲಿಸಿದ್ದಾರೆ. ಅವರ ಈ ತುಚ್ಛ ಹೇಳಿಕೆ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದ ಜನತೆಯ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಯುಪಿಎ ಸರ್ಕಾರದ ಅಭಿವೃದ್ದಿ ಮತ್ತು ರಾಜ್ಯ ಬಿಜೆಪಿ ಸರ್ಕಾರದ ಅಭಿವೃದ್ದಿ ಕುರಿತಂತೆ ಬಹಿರಂಗ ಚರ್ಚೆಗೆ ಆಹ್ವಾನಿಸಿರುವ ಮುಖ್ಯಮಂತ್ರಿಗಳ ಸವಾಲನ್ನು ಸ್ವೀಕರಿಸಿದ್ದೇವೆ, ಚರ್ಚೆಗೂ ಸಿದ್ಧರಿದ್ದೇವೆ ಎಂದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಇದು ಬಂದ ಮೇಲೆ ರಾಜ್ಯದಲ್ಲಿ ನಯಾ ಪೈಸೆಯ ಬಂಡವಾಳ ಹೂಡಿಕೆಯಾಗಿಲ್ಲ. ರಾಜ್ಯದಲ್ಲಿರುವ ಶಿಕ್ಷಣ ಸಂಸ್ಥೆಗಳಿಗೆ ಬೇರೆ ರಾಜ್ಯದಿಂದ ಬರುತ್ತಿದ್ದ ವಿದ್ಯಾರ್ಥಿಗಳು ಕೂಡಾ ಈಗ ಬರುತ್ತಿಲ್ಲ ಎಂದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಕಾಂಗ್ರೆಸ್ ಸ್ಥಾನಮಾನ: ಮತ್ತೆ ಮುನಿಸಿಕೊಂಡ ಸಿದ್ದು
ಮಲಬಾರಿ ವಕೀಲರ ಹತ್ಯೆ: ರವಿ ಪೂಜಾರಿ ಕೃತ್ಯ?
ಡಿವಿಎಸ್, ಅಂಬಿ, ರಾಘವೇಂದ್ರ ನಾಮಪತ್ರ ಸಲ್ಲಿಕೆ
ಕೈ ಕತ್ತರಿಸಿ ಹೇಳಿಕೆ: ಕಾಗೋಡು ಜಾಮೀನು ಅರ್ಜಿ ತಿರಸ್ಕೃತ
20 ಸೀಟು ಕೊಡಿ ನನ್ನ ತಾಕತ್ತು ತೋರಿಸ್ತೇನೆ: ದೇವೇಗೌಡ
ವಾಜಪೇಯಿ ಇದ್ದಾಗ ರಾಮಮಂದಿರ ಯಾಕೆ ಕಟ್ಟಿಸಿಲ್ಲ: ಸಿದ್ದು