ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರು ಎಪ್ರಿಲ್ 15ರಂದು ರಾಜ್ಯದಲ್ಲಿ ಕಾಂಗ್ರೆಸ್ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ.
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಎಪ್ರಿಲ್ 15ರಂದು ಬೀದರ್ ಹಾಗೂ ಚಿಕ್ಕೋಡಿಯಲ್ಲಿ ಪ್ರಚಾರ ಭಾಷಣ ಮಾಡಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಉಸ್ತುವಾರಿ ವಹಿಸಿರುವ ಎಐಸಿಸಿ ಕಾರ್ಯದರ್ಶಿ ಗುಲಾಂ ನಬಿ ಅಜಾದ್, ಕೆಪಿಸಿಸಿ ಅಧ್ಯಕ್ಷ ಆರ್.ವಿ. ದೇಶಪಾಂಡೆ, ಕಾಂಗ್ರೆಸ್ ಮುಖಂಡರಾದ ಎಸ್ಸೆಂ ಕೃಷ್ಣ, ಧರ್ಮಸಿಂಗ್, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ವಿ.ಎಸ್. ಉಗ್ರಪ್ಪ ಸೇರಿದಂತೆ ಇತರ ನಾಯಕರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. |