ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಅನಂತ್ ಕುಮಾರ್ ಅವರು ತಮ್ಮ ಚುನಾವಣಾ ಪ್ರಚಾರಕ್ಕೆ ಎಂಟರಿಂದ 15 ವರ್ಷಗಳೊಳಗಿನ ಮಕ್ಕಳನ್ನು ಬಳಸಿಕೊಂಡಿದ್ದು, ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.
"ದಿನಒಂದಕ್ಕೆ 150 ರೂಪಾಯಿ ನೀಡುತ್ತಿದ್ದಾರೆಂದು ಪ್ರಚಾರದಲ್ಲಿ ಭಾಗವಹಿಸುವ ಮಕ್ಕಳೇ ಹೇಳಿದ್ದಾರೆ. ಇದು ಗಂಭೀರ ಪ್ರಕರಣವಾಗಿದ್ದು ಕಾನೂನು ಉಲ್ಲಂಘನೆಯಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಬೇಕು" ಎಂದೂ ಒತ್ತಾಯಿಸಿದ್ದಾರೆ.
ಕೇಂದ್ರದಲ್ಲಿ ಸಚಿವರಾಗಿದ್ದ ನಾಯಕರ ಇಂತಹ ಕ್ರಮ ಸೂಕ್ತವಲ್ಲ ಎಂದು ಹೇಳಿರುವ ಶಿವಕುಮಾರ್ ಅನಂತ್ ವಿರದ್ಧ ಕ್ರಮಕ್ಕೆ ಆಯೋಗವನ್ನು ಒತ್ತಾಯಿಸಿದ್ದಾರೆ. |