ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಯಡಿಯೂರಪ್ಪ ರೈತರನ್ನು ಕೊಂದ ಪಾಪಿ: ಸಿದ್ದರಾಮಯ್ಯ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಯಡಿಯೂರಪ್ಪ ರೈತರನ್ನು ಕೊಂದ ಪಾಪಿ: ಸಿದ್ದರಾಮಯ್ಯ
NRB
ರಾಜ್ಯದಲ್ಲಿ ಪ್ರಥಮ ಹಂತದ ಚುನಾವಣಾ ಪ್ರಚಾರಕ್ಕೆ ಮಂಗಳವಾರ ಸಂಜೆ ತೆರೆ ಬೀಳಲು ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ರಾಜಕೀಯ ನಾಯಕರ ವಾಗ್ದಾಳಿ ಮುಂದುವರಿದಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಬುಡಬುಡಕಿ ದಾಸ ಎಂದು ಜರೆದಿರುವ ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ, ಗೊಬ್ಬರ ಕೇಳಿದ ರೈತರನ್ನು ಗುಂಡಿಟ್ಟು ಕೊಂದ ಪಾಪಿ ಎಂದು ಕಿಡಿಕಾರಿದ್ದಾರೆ.

ಲೋಕಸಭಾ ಚುನಾವಣೆ ಅಂಗವಾಗಿ ಸೋಮವಾರ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಆಪರೇಷನ್ ಕಮಲದ ಹೆಸರಿನಲ್ಲಿ ಮುಖ್ಯಮಂತ್ರಿ ಮತ್ತು ರೆಡ್ಡಿ ಸಹೋದರರು ರಾಜಕೀಯ ವ್ಯಾಪಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಎರಡು ರೂಪಾಯಿಗೆ ಅಕ್ಕಿ, 24ಗಂಟೆ ವಿದ್ಯುತ್ ನೀಡುವ ಮಾತು ಎಲ್ಲಿಗೆ ಹೋಯಿತು. ಸ್ವಂತ ವರ್ಚಸ್ಸು ಇಲ್ಲದ ಅವರು ವ್ಯಾಪಾರದ ಮೂಲಕ ಪ್ರಭಾವಿಗಳನ್ನೂ ಸೆಳೆದು ಅಧಿಕಾರ ನಡೆಸುತ್ತಿದ್ದಾರೆ. ಸ್ವಂತಿಕೆ ಇಲ್ಲದ ಕೆಲವು ರಾಜಕಾರಣಿಗಳು ಅಧಿಕಾರದ ಆಸೆಯಿಂದ ಪ್ರಜಾಪ್ರಭುತ್ವದ ವ್ಯವಸ್ಥೆಗೆ ಮಸಿ ಬಳಿಯುತ್ತಿದ್ದಾರೆ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ಎನ್‌ಡಿಎ ಅಧಿಕಾರದ ಅವಧಿಯಲ್ಲಿ ಸಾಕಷ್ಟು ಕೋಮುಗಲಭೆ ನಡೆದಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿದರೆ, ದೇಶದಲ್ಲಿ ಕೋಮು ದಳ್ಳುರಿ ಮಿತಿಮೀರಲಿದೆ ಎಂದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಸಮಸ್ಯೆ ಪರಿಹರಿಸದಿದ್ರೆ ರಾಜಕೀಯದಿಂದ ನಿರ್ಗಮನ: ಸಿಎಂ
ಅಧಿಕಾರ ನೀಡಿ: ಸಂವಿಧಾನ ತಿದ್ದುಪಡಿ-ಆಡ್ವಾಣಿ ಭರವಸೆ
ನಕ್ಸಲ್ ಪೀಡಿತ ಪ್ರದೇಶಗಳಿಗೆ ವಿಶೇಷ ಭದ್ರತೆ:ಅಜಯ್ ಕುಮಾರ್
ಶಾಸಕ ಎನ್.ಸಂಪಂಗಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ
ವಸೂಲಿ ಆರೋಪ-ಎಚ್‌ಡಿಕೆ ಕ್ಷಮೆಗೆ ಸಿಎಂ ಆಗ್ರಹ
ಅಂಬೇಡ್ಕರ್‌ಗೆ ಅವಹೇಳನ: ಶಾಸಕ ಮಸ್ಕಿ ಬಂಧನ