ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > 'ಚೌಧರಿ' ವಿರುದ್ಧ ಚಾರ್ಜ್‌‌ಶೀಟ್‌ಗೆ 1 ತಿಂಗಳ ಕಾಲಾವಕಾಶ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
'ಚೌಧರಿ' ವಿರುದ್ಧ ಚಾರ್ಜ್‌‌ಶೀಟ್‌ಗೆ 1 ತಿಂಗಳ ಕಾಲಾವಕಾಶ
PIB
ಮಂಗಳೂರು ಎಮ್ಮೇಶಿಯಾ ಪಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಿತ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ರೇಣುಕ ಚೌಧರಿ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲು ಇಲ್ಲಿನ ಸ್ಥಳೀಯ ನ್ಯಾಯಾಲಯ ಪೊಲೀಸರಿಗೆ ಒಂದು ತಿಂಗಳ ಹೆಚ್ಚುವರಿ ಕಾಲಾವಕಾಶ ನೀಡಿದೆ.

ಪಬ್‌ನಲ್ಲಿ ಅಶ್ಲೀಲ ನರ್ತನ ನಡೆಯುತ್ತಿದೆ ಎಂದು ಆರೋಪಿಸಿ ಶ್ರೀರಾಮಸೇನೆ ದಾಳಿ ನಡೆಸುವ ಮೂಲಕ ದೇಶಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಈ ಸಂದರ್ಭದಲ್ಲಿ ಮಂಗಳೂರು ತಾಲಿಬಾನೀಕರಣಗೊಳ್ಳುತ್ತಿದೆ ಎಂದು ಕೇಂದ್ರ ಸಚಿವೆ ರೇಣುಕ ಚೌಧರಿ ವಾಗ್ದಾಳಿ ನಡೆಸಿದ್ದರು.

ಮಂಗಳೂರಿನ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಬೃಂಗೇಶ್ ಅವರು, ಚೌಧರಿ ವಿರುದ್ಧ ಆರೋಪಪಟ್ಟಿ ಸಲ್ಲಿಸಲು ಇನ್ನೂ ಒಂದು ತಿಂಗಳ ಕಾಲಾವಕಾಶ ನೀಡಬೇಕೆಂಬ ಕೋರಿಕೆಗೆ ಅವಕಾಶ ಕಲ್ಪಿಸಿದ್ದಾರೆ.

ಚೌಧರಿ ವಿರುದ್ಧ ಆರೋಪಪಟ್ಟಿಯನ್ನು ಸಲ್ಲಿಸುವಂತೆ ನ್ಯಾಯಾಲಯ ಪೊಲೀಸರಿಗೆ ನೀಡಿದ ಅಂತಿಮ ಗಡುವು ಸೋಮವಾರ ಕೊನೆಗೊಂಡಿರುವ ಹಿನ್ನೆಲೆಯಲ್ಲಿ ಪೊಲೀಸರು ನ್ಯಾಯಾಲಯದ ಮೊರೆಹೋಗಿ ಹೆಚ್ಚುವರಿ ಕಾಲಾವಕಾಶ ಪಡೆದುಕೊಂಡಿರುವುದಾಗಿ ವಿವರಿಸಿದ್ದಾರೆ.

ಚೌಧರಿ ಹೇಳಿಕೆ ವಿರುದ್ಧ ಮಂಗಳೂರು ಮೇಯರ್ ಗಣೇಶ್ ಹೊಸಬೆಟ್ಟು ಸೇರಿದಂತೆ ನಾಲ್ವರು ಮಂದಿ ಸೂಕ್ತ ಕ್ರಮಕೈಗೊಳ್ಳುವಂತೆ ದೂರು ಸಲ್ಲಿಸಿದ್ದರು. ಅದರಂತೆ ಮನವಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯ ಚೌಧರಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಪೊಲೀಸರಿಗೆ ಆದೇಶ ನೀಡಿತ್ತು. ನ್ಯಾಯಾಲಯದ ಆದೇಶದ ನಂತರ ಮಾರ್ಚ್ 16ರಂದು ಚೌಧರಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಯಡಿಯೂರಪ್ಪ ರೈತರನ್ನು ಕೊಂದ ಪಾಪಿ: ಸಿದ್ದರಾಮಯ್ಯ
ಸಮಸ್ಯೆ ಪರಿಹರಿಸದಿದ್ರೆ ರಾಜಕೀಯದಿಂದ ನಿರ್ಗಮನ: ಸಿಎಂ
ಅಧಿಕಾರ ನೀಡಿ: ಸಂವಿಧಾನ ತಿದ್ದುಪಡಿ-ಆಡ್ವಾಣಿ ಭರವಸೆ
ನಕ್ಸಲ್ ಪೀಡಿತ ಪ್ರದೇಶಗಳಿಗೆ ವಿಶೇಷ ಭದ್ರತೆ:ಅಜಯ್ ಕುಮಾರ್
ಶಾಸಕ ಎನ್.ಸಂಪಂಗಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ
ವಸೂಲಿ ಆರೋಪ-ಎಚ್‌ಡಿಕೆ ಕ್ಷಮೆಗೆ ಸಿಎಂ ಆಗ್ರಹ