ಈ ಬಾರಿಯ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುವಂತೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು ಮತದಾರರಿಗೆ ನಕ್ಸಲೀಯರು ಕರೆ ನೀಡಿದ್ದಾರೆ.
ಮತದಾರರು ಚುನಾವಣೆಯಲ್ಲಿ ಪಾಲ್ಗೊಳ್ಳಬಾರದೆಂಬ ಹಲವು ಕರಪತ್ರಗಳನ್ನು ಬೆಳ್ತಂಗಡಿ ತಾಲೂಕಿನ ಹಳ್ಳಿಗಳ ಮನೆಗಳು ಮತ್ತು ಅಂಗಡಿಗಳ ಮುಂದೆ ರಾತ್ರಿ ಎಸೆದು ಹೋಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಹೆಸರಿನಲ್ಲಿ ಮುದ್ರಿತವಾಗಿರುವ ಈ ಕರಪತ್ರದಲ್ಲಿ ಮತದಾರರು ಮತಗಟ್ಟೆಗಳಿಂದ ದೂರ ಇರುವಂತೆ ಕೋರಲಾಗಿದೆ ಎನ್ನಲಾಗಿದೆ.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆ ಎಲ್ಲ ಕಡೆಗಳಲ್ಲಿಯೂ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದು, ನಕ್ಸಲರ ಬಗ್ಗೆ ತೀವ್ರ ನಿಗಾ ವಹಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. |