ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಯಡಿಯೂರಪ್ಪ ಅತ್ಯಂತ ದುರ್ಬಲ ಸಿಎಂ: ವೀರಪ್ಪ ಮೊಯ್ಲಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಯಡಿಯೂರಪ್ಪ ಅತ್ಯಂತ ದುರ್ಬಲ ಸಿಎಂ: ವೀರಪ್ಪ ಮೊಯ್ಲಿ
ಪ್ರಧಾನಿ ಡಾ.ಮನಮೋಹನ್ ಸಿಂಗ್ ಅತ್ಯಂತ ದುರ್ಬಲ ಪ್ರಧಾನಿ ಎಂಬ ಬಿಜೆಪಿ ಟೀಕಾಪ್ರಹಾರ ನಡೆಸಿದ ಬೆನ್ನಲ್ಲೇ, ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ರಾಜ್ಯ ಕಂಡ ಅತ್ಯಂತ ದುರ್ಬಲ ಮುಖ್ಯಮಂತ್ರಿ ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ವಾಗ್ದಾಳಿ ನಡೆಸಿದ್ದಾರೆ.

ಭ್ರಷ್ಟಾಚಾರದಲ್ಲಿ ಗಿನ್ನೆಸ್ ಪುಸ್ತಕದಲ್ಲಿ ದಾಖಲೆ ಮಾಡುವ ಮುಖ್ಯಮಂತ್ರಿ ಅವರಾಗಿದ್ದಾರೆ ಎಂದು ಮಂಗಳವಾರ ಯಲಹಂಕದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ ತಿಳಿಸಿದ ಅವರು, ಅಧಿಕಾರಕ್ಕೆ ಬಂದ 3-4ತಿಂಗಳಲ್ಲಿ 14ಸಾವಿರ ವರ್ಗಾವಣೆಗಳನ್ನು ಮಾಡುವ ಮೂಲಕ ಭ್ರಷ್ಟಾಚಾರದಲ್ಲಿ ಕರ್ನಾಟಕ ಮೊದಲನೇ ಸ್ಥಾನ ಪಡೆದಿದೆ ಎಂದರು.

ಉದ್ಯೋಗ ಖಾತರಿ ಯೋಜನೆ ಸೇರಿದಂತೆ ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿದ ಸುಮಾರು 30ಸಾವಿರ ಕೋಟಿ ರೂ.ಅನುದಾನವನ್ನು ಇಂದಿಗೂ ಖರ್ಚು ಮಾಡಿಲ್ಲ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ಸಾಧನೆ ಶೂನ್ಯ ಎಂದು ಹೇಳಿದರು.

ಕಾಂಗ್ರೆಸ್‌ನಲ್ಲಿ ಟಿಕೆಟ್ ಪಡೆಯಲು ಅರ್ಹರೆಂದು ನಿರ್ಧರಿಸಿದ್ದ ವ್ಯಕ್ತಿಗಳಿಗೆ ಬಿಜೆಪಿ ಆಹ್ವಾನಿಸಿ ಟಿಕೆಟ್ ನೀಡಿದ್ದು, ಇದು ಅವರ ದಿವಾಳಿತನಕ್ಕೆ ಹಿಡಿದ ಕನ್ನಡಿಯಾಗಿದೆ. ಅಂತಹ ಅಭ್ಯರ್ಥಿಗಳು ಗೆಲ್ಲಲು ಸಾಧ್ಯವೇ ಇಲ್ಲ ಎಂದು ಭವಿಷ್ಯ ನುಡಿದಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಮಂಗಳೂರು: ಮತದಾನ ಬಹಿಷ್ಕರಿಸಲು ನಕ್ಸಲ್ ಕರೆ
ಪ್ರಥಮ ಹಂತ: 17 ಕ್ಷೇತ್ರಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ರೆಡ್ಡಿ ಬಳಿ ಅಪಾರ ಕಪ್ಪು ಹಣವಿದೆ: ಕುಮಾರಸ್ವಾಮಿ
ತೃತೀಯ ರಂಗಕ್ಕೆ ಜನರ ಬೆಂಬಲವಿದೆ: ದೇವೇಗೌಡ
ಭೀಕರ ಅಪಘಾತ: ಸುರತ್ಕಲ್‌‌ನ 6ಮಂದಿ ದಾರುಣ ಸಾವು
'ಚೌಧರಿ' ವಿರುದ್ಧ ಚಾರ್ಜ್‌‌ಶೀಟ್‌ಗೆ 1 ತಿಂಗಳ ಕಾಲಾವಕಾಶ