ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಮೀಸಲಾತಿಗೆ ಯಡಿಯೂರಪ್ಪ ಅಡ್ಡಗಾಲು: ಸಿದ್ದರಾಮಯ್ಯ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಮೀಸಲಾತಿಗೆ ಯಡಿಯೂರಪ್ಪ ಅಡ್ಡಗಾಲು: ಸಿದ್ದರಾಮಯ್ಯ
ಹಿಂದುಳಿದ ವರ್ಗಗಳ ರಾಜಕೀಯ ಮೀಸಲಾತಿಗೆ ಅಡ್ಡಗಾಲು ಹಾಕಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಆ ವರ್ಗದ ಮತ ಕೇಳುವ ನೈತಿಕ ಹಕ್ಕಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

ಜಗಳೂರು ಪಟ್ಟಣದಲ್ಲಿ ಬುಧವಾರ ಕಾಂಗ್ರೆಸ್ ಅಭ್ಯರ್ಥಿ ಎಸ್.ಎಸ್.ಮಲ್ಲಿಕಾರ್ಜುನ್ ಪರ ಹಮ್ಮಿಕೊಂಡಿದ್ದ ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಹಿಂದುಳಿದವರ ಮೀಸಲಾತಿ ಪ್ರಶ್ನಿಸಿ ರಾಜ್ಯಸಭಾ ಸದಸ್ಯ ರಾಮಾ ಜೋಯಿಸ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಇದಕ್ಕೆ ಯಡಿಯೂರಪ್ಪ ಹಾಗೂ ಅನಂತ್ ಕುಮಾರ್ ಅವರ ಕುಮ್ಮಕ್ಕು ಇದೆ ಎಂದು ಆರೋಪಿಸಿದರು.

ರಾಜಕೀಯ ಮೀಸಲಾತಿ ಪರಿಣಾಮ ಗ್ರಾಮಪಂಚಾಯ್ತಿ, ತಾಲೂಕು ಹಾಗೂ ಜಿಲ್ಲಾ ಪಂಚಾಯ್ತಿಯಲ್ಲಿ ಹಿಂದುಳಿದ ವರ್ಗದ ಜನರು ಚುನಾಯಿತರಾಗುತ್ತಿದ್ದಾರೆ. ಪರಿಶಿಷ್ಟರು ಸೇರಿದಂತೆ ಮುಂದುವರಿದ ಬಡವರಿಗೂ ಮೀಸಲಾತಿ ಕಲ್ಪಿಸಲಾಗಿತ್ತು. ಅದನ್ನೇ ಪ್ರಶ್ನಿಸುವ ಮೂಲಕ ಯಡಿಯೂರಪ್ಪ ಅವರ ಗೋಸುಂಬೆತನ ಬಯಲಾಗಿದೆ ಎಂದು ದೂರಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ರೈತರನ್ನು ಕೊಲ್ಲುವ ಕಟುಕ ನಾನಲ್ಲ: ಯಡಿಯೂರಪ್ಪ
ರಾಜ್ಯದ 17 ಕ್ಷೇತ್ರಗಳಲ್ಲಿ ಬಿರುಸಿನ ಮತದಾನ
ಎಸ್ಎಂಎಸ್‌ ಮೂಲಕ ತಮ್ಮ ಮತಗಟ್ಟೆ ವಿವರ
ಸಾಯೋಮುನ್ನ ಬಡವರ ಕಣ್ಣೀರೊರೆಸಬೇಕು: ಗೌಡ
ನಾಯಿ-ನರಿಗಳೆಲ್ಲ ಮಂತ್ರಿಗಳು: ವಾಟಾಳ್ ನಾಗರಾಜ್
ಹತ್ಯೆ ಪ್ರಕರಣ: 11ಮಂದಿಗೆ ಜೀವಾವಧಿ ಸಜೆ