ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಮಾರಾಮಾರಿ: ಬಂಗಾರಪ್ಪ ಮೇಲೆ ಕಲ್ಲೆಸೆತ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಮಾರಾಮಾರಿ: ಬಂಗಾರಪ್ಪ ಮೇಲೆ ಕಲ್ಲೆಸೆತ
ಲಾಠಿ ಏಟು-ಪತ್ರಕರ್ತರು ಸೇರಿ ಹಲವರಿಗೆ ಗಾಯ
ಲೋಕಸಭಾ ಚುನಾವಣೆಯ ಎರಡನೇ ಹಂತದ ಮತಪ್ರಚಾರದ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಹಾಗೂ ಶಾಸಕ ಸಂಗಮೇಶ್ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿದ್ದು, ಬಂಗಾರಪ್ಪ ಮೇಲೆ ಕಲ್ಲೆಸೆದ ಘಟನೆ ಭದ್ರಾವತಿಯಲ್ಲಿ ಗುರುವಾರ ನಡೆದಿದೆ.

ಭದ್ರಾವತಿಯಲ್ಲಿ ನಡೆಯುತ್ತಿದ್ದ ಸಭೆಯೊಂದರಲ್ಲಿ ಶಾಸಕ ಸಂಗಮೇಶ್ ಅವರನ್ನು ವೇದಿಕೆ ಮೇಲೆ ಕುಳ್ಳಿರಿಸಬಾರದು, ಅವರ ಕಾಂಗ್ರೆಸ್‌ನಲ್ಲೇ ಇದ್ದು ಬಿಜೆಪಿ ಪರ ಕಾರ್ಯನಿರ್ವಹಿಸುತ್ತಿದ್ದಾರೆಂದು ಆರೋಪಿಸಿ ಬಂಗಾರಪ್ಪ ಬೆಂಬಲಿಗರು ಆಕ್ಷೇಪ ವ್ಯಕ್ತಪಡಿಸಿದಾಗ, ಸಂಗಮೇಶ್ ಬೆಂಬಲಿಗರು ಕೈ ಮಿಲಾಯಿಸಲು ಮುಂದಾದ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿತ್ತು. ಈ ಸಂದರ್ಭದಲ್ಲಿ ಭಾಷಣ ಮಾಡುತ್ತಿದ್ದ ಬಂಗಾರಪ್ಪ ಅವರ ಮೇಲೆ ಕಲ್ಲು ತೂರಿದ ಪರಿಣಾಮ ಕಲ್ಲು ಅವರ ಎದೆಗೆ ತಾಗಿದ್ದು, ತಕ್ಷಣವೇ ಭಾಷಣ ನಿಲ್ಲಿಸಿ ಅಲ್ಲಿಂದ ನಿರ್ಗಮಿಸಿದರು.

ಬೆಂಬಲಿಗರ ನಡುವಿನ ಹೊಯ್ ಕೈ ನೋಡಿ, ಸಮಾರಂಭದಲ್ಲಿ ಭಾಗವಹಿಸಲು ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಕೂಡ ಸಭೆಯಲ್ಲಿ ಭಾಗವಹಿಸದೆ ತೀರ್ಥಹಳ್ಳಿಗೆ ವಾಪಸಾಗಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯನ್ನು ನಿಯಂತ್ರಿಸಲು ಪೊಲೀಸರು ಲಾಠಿಪ್ರಹಾರ ನಡೆಸಿದ್ದು, ಮೂವರು ಪತ್ರಕರ್ತರು ಸೇರಿದಂತೆ ಹಲವು ಮಂದಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಪತ್ರಕರ್ತರೊಬ್ಬರ ಕಾಲು ಮುರಿದಿದ್ದು, ಕಾಳ್ತುಳಿತದಿಂದಾಗಿ ಮಹಿಯೊಬ್ಬರು ಗಾಯಗೊಂಡಿದ್ದಾರೆಂದು ಅಧಿಕಾರಿಗಳು ವಿವರಿಸಿದ್ದಾರೆ.

ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿತ್ತು, ಬಂಗಾರಪ್ಪ ಮತ್ತು ಸಂಗಮೇಶ್ ಬೆಂಬಲಿಗರು ಗುಂಪುಗೂಡಿ ಘರ್ಷಣೆಗೆ ಇಳಿದಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತರುವಲ್ಲಿ ಪೊಲೀಸರು ಮುಂದಾಗಿರುವುದಾಗಿ ಹೇಳಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಮೀಸಲಾತಿಗೆ ಯಡಿಯೂರಪ್ಪ ಅಡ್ಡಗಾಲು: ಸಿದ್ದರಾಮಯ್ಯ
ರೈತರನ್ನು ಕೊಲ್ಲುವ ಕಟುಕ ನಾನಲ್ಲ: ಯಡಿಯೂರಪ್ಪ
ರಾಜ್ಯದ 17 ಕ್ಷೇತ್ರಗಳಲ್ಲಿ ಬಿರುಸಿನ ಮತದಾನ
ಎಸ್ಎಂಎಸ್‌ ಮೂಲಕ ತಮ್ಮ ಮತಗಟ್ಟೆ ವಿವರ
ಸಾಯೋಮುನ್ನ ಬಡವರ ಕಣ್ಣೀರೊರೆಸಬೇಕು: ಗೌಡ
ನಾಯಿ-ನರಿಗಳೆಲ್ಲ ಮಂತ್ರಿಗಳು: ವಾಟಾಳ್ ನಾಗರಾಜ್