ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿ ಪಕ್ಷ ಅಕ್ರಮವಾಗಿ ಹಣ, ಹೆಂಡವನ್ನು ದಾಸ್ತಾನು ಮಾಡಿದ್ದು ಅದನ್ನು ಮತದಾರರಿಗೆ ಇಂದಿನಿಂದ ಹಂಚುವ ಸಾಧ್ಯತೆ ಇದೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಶಂಕೆ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗದಲ್ಲಿ ಗುರುವಾರ ಮಾಧ್ಯಮ ಕಚೇರಿಯಿಂದ ಉದ್ಘಾಟಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಜಿಲ್ಲೆಯಲ್ಲಿ ಬಿಜೆಪಿ ಪಕ್ಷ ಮತದಾರರನ್ನು ತನ್ನತ್ತ ಸೆಳೆಯಲು ಅಕ್ರಮ ದಂಧೆಯಲ್ಲಿ ತೊಡಗಿದ್ದು, ಪೊಲೀಸರು ಈ ಬಗ್ಗೆ ಯಾವುದೇ ತಲೆಕೆಡಿಸಿಕೊಂಡಿಲ್ಲ ಎಂದು ದೂರಿದರು.
ಅಧಿಕಾರಿಗಳು ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸದೆ ಬಿಜೆಪಿ ಏಜೆಂಟರಂತೆ ವರ್ತಿಸುತ್ತಿದ್ದಾರೆ ಅಕ್ರಮದ ಸಂಬಂಧ ದೂರು ಕೊಡಲು ಹೋದ ವ್ಯಕ್ತಿಗಳ ವಿರುದ್ಧ ಸುಳ್ಳು ಕೇಸುಗಳನ್ನು ಪೊಲೀಸರೇ ಹಾಕುತ್ತಿದ್ದಾರೆ ಎಂದು ಟೀಕಿಸಿದರು.
ಶಿವಮೊಗ್ಗ ಜಿಲ್ಲೆಯ ಹಲವೆಡೆ ತಾವು ಬಂಗಾರಪ್ಪ, ಮಧು ಬಂಗಾರಪ್ಪ, ಕುಮಾರ್ ಬಂಗಾರಪ್ಪ ಅವರೊಂದಿಗೆ ಪ್ರವಾಸ ಮಾಡಿದ್ದೇ ಕ್ಷೇತ್ರದಲ್ಲಿ ಕಾಂಗ್ರೆಸ್ ಪರವಾದ ಅಲೆ ಇದ್ದು, ಈ ಸಲದ ಚುನಾವಣೆಯಲ್ಲಿ ಬಂಗಾರಪ್ಪ ಅವರ ಗೆಲುವು ಖಚಿತ ಎಂದು ನುಡಿದರು. |