ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಘಟಾನುಘಟಿಗಳ 'ಹಣೆಬರಹ' ಮತಪೆಟ್ಟಿಗೆಯಲ್ಲಿ ಭದ್ರ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಘಟಾನುಘಟಿಗಳ 'ಹಣೆಬರಹ' ಮತಪೆಟ್ಟಿಗೆಯಲ್ಲಿ ಭದ್ರ
PTI
ರಾಜ್ಯದ 17ಕ್ಷೇತ್ರಗಳಲ್ಲಿ ಗುರುವಾರ ಮತದಾರರು ತಮ್ಮ ಮತ ಚಲಾಯಿಸಿದ್ದು, ಮಾಜಿ ಮುಖ್ಯಮಂತ್ರಿಗಳಾದ ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ವೀರಪ್ಪ ಮೊಯ್ಲಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಎಚ್.ಡಿ.ಕುಮಾರಸ್ವಾಮಿ, ಬೀದರ್ ಕ್ಷೇತ್ರದಿಂದ ಧರಂಸಿಂಗ್, ಅನಂತ್ ಕುಮಾರ್, ಮಲ್ಲಿಕಾರ್ಜುನ ಖರ್ಗೆ, ರೇವೂನಾಯಕ ಬೆಳಮಗಿ, ಕೃಷ್ಣಬೈರೇಗೌಡ, ಆಳ್ವ ಸೇರಿದಂತೆ ಹಲವು ಘಟಾನುಘಟಿಗಳ ಹಣೆಬರಹ ಮತಪೆಟ್ಟಿಗೆ ಸೇರಿದ್ದು, ಮತಪೆಟ್ಟಿಗೆಗಳನ್ನು ಇದೀಗ ಪೊಲೀಸ್ ಸರ್ಪಗಾವಲಿನಲ್ಲಿ ಇರಿಸಲಾಗಿದೆ.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಗಳ ಮತಪೆಟ್ಟಿಗೆಗಳನ್ನು ಜಯನಗರ 7ನೇ ಬ್ಲಾಕ್‌ನಲ್ಲಿರುವ ಎಸ್‌ಎಸ್‌ಎಸ್‌ಎಂಆರ್‌ವಿ ಕಾಲೇಜಿನಲ್ಲಿ ಇಡಲಾಗಿದೆ. ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಮತಯಂತ್ರವನ್ನು ವಸಂತನಗರದ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಎಲೆಕ್ಟ್ರಾನಿಕ್ಸ್ ಮತಪೆಟ್ಟಿಗೆಗಳನ್ನು ನಗರದ ಕಲಾ ಮತ್ತು ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಡಲಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಎಲೆಕ್ಟ್ರಾನಿಕ್ಸ್ ಮತಪೆಟ್ಟಿಗೆಗಳನ್ನು ರಾಮನಗರದ ಗೌಸಿಯಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಡಲಾಗುವುದು.

ಮೇ 16ರಂದು ಮತ ಎಣಿಕೆ ನಡೆಯಲಿದ್ದು, ಅಲ್ಲಿಯವರೆಗೆ ಈ ಎಲೆಕ್ಟ್ರಾನಿಕ್ಸ್ ಮತಪೆಟ್ಟಿಗೆಗಳನ್ನು ಪೊಲೀಸ್ ಬಿಗು ಬಂದೋಬಸ್ತ್‌ನಲ್ಲಿ ಇಡಲಾಗುವುದು ಎಂದು ಪೊಲೀಸ್ ಕಮಿಷನರ್ ಶಂಕರ್ ಬಿದರಿ ತಿಳಿಸಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಬಿಜೆಪಿಯಿಂದ ಅಕ್ರಮ ಹೆಂಡ ದಾಸ್ತಾನು: ಕಾಗೋಡು
ಸಿವಿಲ್ ಕೋರ್ಟ್ ಸಂಕೀರ್ಣದಲ್ಲಿ ಅಗ್ನಿ ದುರಂತ
ರಾಜ್ಯದಲ್ಲಿ ಶೇ.51ರಷ್ಟು ಮತದಾನ
ರಾಜ್ಯದ ಆಡಳಿತಕ್ಕೆ ಮೇಜರ್ ಸರ್ಜರಿ: ಯಡಿಯೂರಪ್ಪ
ಮಾರಾಮಾರಿ: ಬಂಗಾರಪ್ಪ ಮೇಲೆ ಕಲ್ಲೆಸೆತ
ಮೀಸಲಾತಿಗೆ ಯಡಿಯೂರಪ್ಪ ಅಡ್ಡಗಾಲು: ಸಿದ್ದರಾಮಯ್ಯ