ರಾಜ್ಯದ 17ಕ್ಷೇತ್ರಗಳಲ್ಲಿ ಗುರುವಾರ ಮತದಾರರು ತಮ್ಮ ಮತ ಚಲಾಯಿಸಿದ್ದು, ಮಾಜಿ ಮುಖ್ಯಮಂತ್ರಿಗಳಾದ ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ವೀರಪ್ಪ ಮೊಯ್ಲಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಎಚ್.ಡಿ.ಕುಮಾರಸ್ವಾಮಿ, ಬೀದರ್ ಕ್ಷೇತ್ರದಿಂದ ಧರಂಸಿಂಗ್, ಅನಂತ್ ಕುಮಾರ್, ಮಲ್ಲಿಕಾರ್ಜುನ ಖರ್ಗೆ, ರೇವೂನಾಯಕ ಬೆಳಮಗಿ, ಕೃಷ್ಣಬೈರೇಗೌಡ, ಆಳ್ವ ಸೇರಿದಂತೆ ಹಲವು ಘಟಾನುಘಟಿಗಳ ಹಣೆಬರಹ ಮತಪೆಟ್ಟಿಗೆ ಸೇರಿದ್ದು, ಮತಪೆಟ್ಟಿಗೆಗಳನ್ನು ಇದೀಗ ಪೊಲೀಸ್ ಸರ್ಪಗಾವಲಿನಲ್ಲಿ ಇರಿಸಲಾಗಿದೆ.ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಗಳ ಮತಪೆಟ್ಟಿಗೆಗಳನ್ನು ಜಯನಗರ 7ನೇ ಬ್ಲಾಕ್ನಲ್ಲಿರುವ ಎಸ್ಎಸ್ಎಸ್ಎಂಆರ್ವಿ ಕಾಲೇಜಿನಲ್ಲಿ ಇಡಲಾಗಿದೆ. ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಮತಯಂತ್ರವನ್ನು ವಸಂತನಗರದ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಎಲೆಕ್ಟ್ರಾನಿಕ್ಸ್ ಮತಪೆಟ್ಟಿಗೆಗಳನ್ನು ನಗರದ ಕಲಾ ಮತ್ತು ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಡಲಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಎಲೆಕ್ಟ್ರಾನಿಕ್ಸ್ ಮತಪೆಟ್ಟಿಗೆಗಳನ್ನು ರಾಮನಗರದ ಗೌಸಿಯಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಡಲಾಗುವುದು.ಮೇ 16ರಂದು ಮತ ಎಣಿಕೆ ನಡೆಯಲಿದ್ದು, ಅಲ್ಲಿಯವರೆಗೆ ಈ ಎಲೆಕ್ಟ್ರಾನಿಕ್ಸ್ ಮತಪೆಟ್ಟಿಗೆಗಳನ್ನು ಪೊಲೀಸ್ ಬಿಗು ಬಂದೋಬಸ್ತ್ನಲ್ಲಿ ಇಡಲಾಗುವುದು ಎಂದು ಪೊಲೀಸ್ ಕಮಿಷನರ್ ಶಂಕರ್ ಬಿದರಿ ತಿಳಿಸಿದ್ದಾರೆ. |