ಮತದಾನದ ಮೇಲೆ ನಕ್ಸಲೀಯರ ಚುನಾವಣಾ ಬಹಿಷ್ಕಾರದ ಕರೆ ಯಾವ ಪರಿಣಾಮವನ್ನೂ ಬೀರದು ಎಂದು ಗೃಹ ಸಚಿವ ಡಾ.ವಿ.ಎಸ್.ಆಚಾರ್ಯ ಹೇಳಿದ್ದಾರೆ.
ಕಳೆದ ಚುನಾವಣೆಯಲ್ಲಿ ಈ ಪ್ರದೇಶದಲ್ಲಿ ಶೇ.82ರಷ್ಟು ಮತದಾನವಾಗಿತ್ತು, ಈ ಬಾರಿ ಅದಕ್ಕಿಂತಲೂ ಹೆಚ್ಚು ಮತದಾನವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಕ್ಸಲರ ಬಳಿ ವಿದೇಶಿ ಶಸ್ತ್ರಾಸ್ತ್ರಗಳಿದ್ದರೂ ಅವರನ್ನು ಬಗ್ಗುಬಡಿಯಲು ಪೊಲೀಸ್ ಇಲಾಖೆ ಸಮರ್ಥವಾಗಿದೆ ಎಂದು ಗುರುವಾರ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದ್ದಾರೆ.
ಬಿಹಾರ, ಛತ್ತೀಸ್ಗಢ ರಾಜ್ಯಗಳಲ್ಲಿ ನಕ್ಸಲರು ಚುನಾವಣೆ ಸಂದರ್ಭದಲ್ಲಿ ಹಿಂಸಾಕೃತ್ಯಗಳ್ನು ನಡೆಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವ ರೀತಿ ಭದ್ರತೆಯನ್ನು ಕೈಗೊಳ್ಳಬೇಕೋ ಅದನ್ನೆಲ್ಲಾ ಇಲಾಖೆ ನಿರ್ವಹಿಸಿದೆ. ಏನು ಕ್ರಮ ಕೈಗೊಂಡಿದ್ದೇವೆ ಎಂದು ಬಹಿರಂಗಪಡಿಸಲಾಗದು ಎಂದರು. |