ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಭವಿಷ್ಯ ಕೇಳುತ್ತಿದ್ರೆ.ಮನೆಯಲ್ಲಿ ಕೂತ್ಕೋಬೇಕಾಗುತ್ತೆ: ದೇವೇಗೌಡ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಭವಿಷ್ಯ ಕೇಳುತ್ತಿದ್ರೆ.ಮನೆಯಲ್ಲಿ ಕೂತ್ಕೋಬೇಕಾಗುತ್ತೆ: ದೇವೇಗೌಡ
NRB
ನಾವು ಜ್ಯೋತಿಷಿಗಳ ಭವಿಷ್ಯ ಕೇಳುತ್ತಾ ಕುಳಿತರೆ ನಾಮ ಹಾಕಿಕೊಂಡು ಮನೆಯಲ್ಲಿ ಕುಳಿತುಕೊಳ್ಳಬೇಕಾಗುತ್ತದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಚೆನ್ನರಾಯಪಟ್ಟಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಸಂದರ್ಭದಲ್ಲಿ, ಪೂಜೆ, ಹೋಮ, ಹವನ, ಜ್ಯೋತಿಷಿಗಳ ಮೊರೆ ಹೋಗುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಪರಿ ಇದಾಗಿದೆ.

ರಾಜ್ಯದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ಒಳಒಪ್ಪಂದವಾಗಿದೆ ಎಂಬ ಆರೋಪವನ್ನು ಬಲವಾಗಿ ತಳ್ಳಿ ಹಾಕಿದ ಅವರು, ದೇಶದಲ್ಲಿ ಯುಪಿಎ ತನ್ನ ಅಸ್ತಿತ್ವ ಕಳೆದುಕೊಂಡಿದ್ದು, ಅದಕ್ಕೆ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ದೇಶದ ಜನತೆ ಎನ್‌‌ಡಿಎ ಮತ್ತು ಯುಪಿಎ ಸರ್ಕಾರಗಳ ಆಡಳಿತದಿಂದ ಬೇಸತ್ತು ಹೋಗಿದ್ದಾರೆ. ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ತೃತೀಯರಂಗ ರಾಷ್ಟ್ರ ರಾಜಕಾರಣದಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಹಾಗೇ ಒಂದು ವೇಳೆ ತೃತೀಯ ರಂಗ ಅಧಿಕಾರದ ಗದ್ದುಗೆ ಹಿಡಿದಲ್ಲಿ ಬಜರಂಗದಳ, ಶ್ರೀರಾಮಸೇನೆಯನ್ನು ನಿಷೇಧಿಸುವುದಾಗಿ ಪುನರುಚ್ಚರಿಸಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ನೌಶಾದ್ ಹತ್ಯೆ ಪ್ರಕರಣ: 6 ಮಂದಿ ಬಂಧನ
ಬಡವರ ಬದುಕು ಪ್ರಕಾಶಿಸಬೇಕು: ರಾಹುಲ್
ಬೆಂ.ದ: ಮರುಚುನಾವಣೆಗೆ ಕಾಂಗ್ರೆಸ್ ಆಗ್ರಹ
ಬಂಗಾರಪ್ಪ ಅಹಂಕಾರದ ರಾಜಕಾರಣಿ: ಶಾಸಕ ಸಂಗಮೇಶ್
ನಕ್ಸಲರ ಮತ ಬಹಿಷ್ಕಾರ ಕರೆಗೆ ಬೆಲೆ ಸಿಗದು: ಆಚಾರ್ಯ
ಘಟಾನುಘಟಿಗಳ 'ಹಣೆಬರಹ' ಮತಪೆಟ್ಟಿಗೆಯಲ್ಲಿ ಭದ್ರ