ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > 14 ಕ್ಷೇತ್ರಗಳಲ್ಲಿ ಜಯ ನಿಶ್ಚಿತ: ಯಡಿಯೂರಪ್ಪ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
14 ಕ್ಷೇತ್ರಗಳಲ್ಲಿ ಜಯ ನಿಶ್ಚಿತ: ಯಡಿಯೂರಪ್ಪ
ರಾಜ್ಯದಲ್ಲಿ ನಡೆದ ಮೊದಲ ಹಂತದ ಚುನಾವಣೆಯ 17 ಲೋಕಸಭಾ ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ನಡೆದ ಬಿಜೆಪಿ ಪ್ರಚಾರ ಆಂದೋಳನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶದಲ್ಲಿ ಎನ್‌ಡಿಎ ಸರ್ಕಾರದ ಸಂದರ್ಭದಲ್ಲಿ ದೇಶಕ್ಕಾಗಿ ನಾನು ಎಂಬ ಭಾವನೆ ಇತ್ತು. ಆದರೆ ಯುಪಿಎ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ನನಗಾಗಿ ದೇಶ ಎಂದು ಬದಲಿಸಿಕೊಂಡರು. ಯುವಕರಲ್ಲಿ ದೇಶಭಕ್ತಿಯನ್ನು ಹೋಗಲಾಡಿಸುವಂತೆ ಮಾಡಿದವರು ಕಾಂಗ್ರೆಸ್ಸಿಗರೇ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.

ಈ ಹಿಂದೆ ವಾಜಪೇಯಿ ಸರ್ಕಾರದ ಮಾದರಿಯನ್ನು ಮುಂದಿನ ದಿನಗಳಲ್ಲಿ ಆಡ್ವಾಣಿ ಮುಂದುವರಿಸಿಕೊಂಡು ಹೋಗಲಿದ್ದಾರೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಪ್ರಜಾತಂತ್ರ ವ್ಯವಸ್ಥೆಯಲ್ಲಿ ಪ್ರಾದೇಶಿಕ ಪಕ್ಷಗಳು ಹೆಚ್ಚಾಗುತ್ತಿರುವುದು ಅಭಿವೃದ್ದಿಗೆ ಮಾರಕವಾಗಿದೆ. ದೇಶದ ಮುನ್ನಡೆಗೆ ಎರಡೇ ಎರಡು ರಾಷ್ಟ್ರೀಯ ಪಕ್ಷಗಳು ಸಾಕು. ಒಂದು ಆಡಳಿತ ಹಾಗೂ ಇನ್ನೊಂದು ಪ್ರತಿಪಕ್ಷ ಎಂದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಭವಿಷ್ಯ ಕೇಳುತ್ತಿದ್ರೆ.ಮನೆಯಲ್ಲಿ ಕೂತ್ಕೋಬೇಕಾಗುತ್ತೆ: ದೇವೇಗೌಡ
ನೌಶಾದ್ ಹತ್ಯೆ ಪ್ರಕರಣ: 6 ಮಂದಿ ಬಂಧನ
ಬಡವರ ಬದುಕು ಪ್ರಕಾಶಿಸಬೇಕು: ರಾಹುಲ್
ಬೆಂ.ದ: ಮರುಚುನಾವಣೆಗೆ ಕಾಂಗ್ರೆಸ್ ಆಗ್ರಹ
ಬಂಗಾರಪ್ಪ ಅಹಂಕಾರದ ರಾಜಕಾರಣಿ: ಶಾಸಕ ಸಂಗಮೇಶ್
ನಕ್ಸಲರ ಮತ ಬಹಿಷ್ಕಾರ ಕರೆಗೆ ಬೆಲೆ ಸಿಗದು: ಆಚಾರ್ಯ